ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಯುವಕರು ನೀರುಪಾಲು

Public TV
1 Min Read

ಮೈಸೂರು: ಗೆಳೆಯನ ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮದ ಬಳಿ ನಡೆದಿದೆ.

ಅಭಿಷೇಕ್ (21) ಮತ್ತು ಅಂಕೇಶ್ (21) ನೀರು ಪಾಲಾದ ಯುವಕರು. ಇಬ್ಬರು ಯಳಂದೂರು ತಾಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಚಾಮರಾಜನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇದನ್ನೂ ಓದಿ: ಕೊರೊನಾ ತಡೆಗಾಗಿ ಅಕ್ಕಿ ತೊಳೆದ ನೀರು ಕುಡಿಯುತ್ತಿರುವ ಮಹಿಳೆಯರು

ತಡಿಮಾಲಂಗಿ ಗ್ರಾಮಕ್ಕೆ ಸ್ನೇಹಿತನ ಹುಟ್ಟುಹಬ್ಬಕ್ಕೆ ಇಬ್ಬರು ಆಗಮಿಸಿದ್ದರು. ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದುಡ್ಡಿಲ್ಲ ಅಂದ್ರೆ ಫೈಲ್ ಮುಟ್ಟಲ್ಲ – ಬೆಸ್ಕಾಂ ಅಧಿಕಾರಿಯ ಲಂಚಾವತಾರ ವೀಡಿಯೋ ವೈರಲ್

Share This Article
Leave a Comment

Leave a Reply

Your email address will not be published. Required fields are marked *