ಬಸ್‍ಗಾಗಿ ಸಿನಿಮಾ ಶೈಲಿಯಲ್ಲಿ ಬಡಿದಾಡಿದ ವಿದ್ಯಾರ್ಥಿಗಳು

Public TV
1 Min Read

ಯಾದಗಿರಿ: ಬಸ್‍ಗಾಗಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗುಂಡ್ಲಾಪುರದಲ್ಲಿ ನಡೆದಿದೆ.

ಬಸ್‍ಗಾಗಿ ನಗನೂರು ಮತ್ತು ಗುಂಡ್ಲಾಪುರ ಗ್ರಾಮದ ಕಾಲೇಜು ವಿದ್ಯಾರ್ಥಿಗಳು ಸಿನಿಮಾ ಶೈಲಿಯಲ್ಲಿ ಪರಸ್ಪರ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ.

ನಗನೂರ ಮತ್ತು ಗುಂಡ್ಲಾಪುರ ಮಾರ್ಗದಲ್ಲಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯಿದೆ. ಹೀಗಾಗಿ ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳಿಗೆ ಬೆಳಗ್ಗೆ 7:30ಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಹೀಗಿದ್ದರೂ ವಿಶೇಷ ಬಸ್‍ನಲ್ಲಿ ತೆರಳದ ಗುಂಡ್ಲಾಪುರ ವಿದ್ಯಾರ್ಥಿಗಳು 8 ಗಂಟೆಗೆ ನಗನೂರಿಂದ ಬರುವ ಬಸ್‍ನಲ್ಲಿ ಬರಲು ಮುಂದಾಗುತ್ತಿದ್ದಾರೆ.

ಇದರಿಂದಾಗಿ ಬಸ್ ಸಂಪೂರ್ಣ ಭರ್ತಿಯಾಗಿ ನಗನೂರಿನ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ವಿಚಾರಕ್ಕೆ ಇಂದು ಗುಂಡ್ಲಾಪುರ ಬಳಿ ಎರಡು ಗ್ರಾಮದ ವಿದ್ಯಾರ್ಥಿಗಳು ಸಿನಿಮಾ ಶೈಲಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಈ ಘಟನೆಯು ಗೂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *