ಬಸ್, ಲಾರಿ ನಡುವೆ ಭೀಕರ ಅಫಘಾತ – ಚಾಲಕ ಸಜೀವ ದಹನ

Public TV
1 Min Read

ಮಂಗಳೂರು: ಬಸ್ ಹಾಗೂ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಮಂಗಳೂರಿನಿಂದ- ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‍ಗೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಎರಡು ಗಾಡಿಗಳ ಮಧ್ಯೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಲಾರಿ ಚಾಲಕ ಸಜೀವ ದಹನವಾಗಿದ್ದಾರೆ.

ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ತಕ್ಷಣ ಬಸ್‍ನಿಂದ ಕೆಳಗಿಳಿದು ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಸ್ ಹಾಗೂ ಲಾರಿ ಎರಡು ಸುಟ್ಟು ಭಸ್ಮವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *