ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಅಂತ್ಯಸಂಸ್ಕಾರವನ್ನೂ ಮುಗಿಸಿದ್ರು!

Public TV
2 Min Read

– ಬಾಲಕಿಯ ತಾಯಿ ಮುಂದೆ ಕಥೆ ಕಟ್ಟಿದ ದುಷ್ಕರ್ಮಿಗಳು

ನವದೆಹಲಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಬಳಿಕ ಆಕೆಯನ್ನು ಕೊಲೆಗೈದು ಅಂತ್ಯಸಂಸ್ಕಾರ ಕೂಡ ನೆರವೇರಿಸಿದ ಅಮಾನವೀಯ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮೆಂಟ್ ಏರಿಯಾದ ನಂಗಲ್ ಗ್ರಾಮದಲ್ಲಿ ನಡೆದಿದೆ.

ಹೌದು. ದುಷ್ಕರ್ಮಿಗಳು 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ತಮ್ಮ ಕಾಮತೃಷೆ ತೀರಿಸಿಕೊಂಡ ಬಳಿಕ ಆಕೆಯನ್ನು ಬರ್ಬರವಾಗಿ ಕೊಲೆಗೈದು ನಂತರ ಸುಟ್ಟುಹಾಕಿದ್ದಾರೆ. ಇಷ್ಟೆಲ್ಲ ಮಾಡಿದ ಬಳಿಕ ಬಾಲಕಿಯ ಪೋಷಕರಿಗೆ ಕರೆ ಮಾಡಿರುವ ದುಷ್ಕರ್ಮಿಗಳು, ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸದಂತೆಯೂ ಹೇಳಿದ್ದಾರೆ.

ಮೂಲಗಳ ಪ್ರಕಾರ, ಬಾಲಕಿ ಸಂಜೆ 5.30ರ ಸುಮಾರಿಗೆ ಮನೆಯಿಂದ ಹೊರಬಂದಿದ್ದಳು. ಸ್ಮಶಾನದಲ್ಲಿರುವ ವಾಟರ್ ಕೂಲರ್ ನಿಂದ ಕೋಲ್ಡ್ ವಾಟರ್ ತರಲು ಹೋಗಿದ್ದ ಬಾಲಕಿ ಮನೆಗೆ ವಾಪಸ್ ಬರಲೇ ಇಲ್ಲ. ಇತ್ತ 6 ಗಂಟೆ ಸುಮಾರಿಗೆ ಸ್ಮಶಾನದ ಅರ್ಚಕ ಹಾಗೂ ಮತ್ತಿಬ್ಬರು ಬಾಲಕಿಯ ತಾಯಿಯನ್ನು ಕರೆದು ರುದ್ರಭೂಮಿಯಲ್ಲಿ ಬಿದ್ದಿದ್ದ ಅಪ್ರಾಪ್ತೆಯ ಶವವನ್ನು ತೋರಿಸಿದರು. ಜೊತೆಗೆ ವಾಟರ್ ಕೂಲರ್ ನಿಂದ ಕುಡಿಯುವ ನೀರನ್ನು ತೆಗೆದುಕೊಳ್ಳುವಾಗ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ವಿವರಣೆ ಕೂಡ ನೀಡಿದ್ದಾರೆ.

ವ್ಯಕ್ತಿಗಳ ಮಾತುಗಳನ್ನು ಕೇಳಿದ ಬಾಲಕಿಯ ತಾಯಿಗೆ ಕೂಡಲೇ ಅನುಮಾನ ಬಂದಿದೆ. ಅಲ್ಲದೆ ನನ್ನ ಮಗಳ ದೇಹದ ಮೇಲೆ ಗಾಯದ ಕಲೆಗಳಿದ್ದವು. ಆಕೆಯ ಮೊಣಕೈ, ಮಣಿಕಟ್ಟಿನ ಮೇಲೆ ಗಾಯಗಳಾಗಿದ್ದವು. ಜೊತೆಗೆ ತುಟಿಗಳು ನೀಲಿ ಬಣ್ಣಕ್ಕೆ ತಿರುಗಿದ್ದವು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಇದನ್ನೂ ಓದಿ: ಕುಂದಾಪುರದಿಂದ ಹೊರಟಿದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಪತ್ರ

ಅರ್ಚಕ ಹಾಗೂ ಅಲ್ಲೇ ಇದ್ದ ಇನ್ನಿಬ್ಬರು ವ್ಯಕ್ತಿಗಳು ಪೊಲೀಸರಿಗೆ ಕರೆ ಮಾಡದಂತೆ ಬಾಲಕಿಯ ತಾಯಿಗೆ ಹೇಳಿದ್ದಾರೆ. ಒಂದು ವೇಳೆ ನೀವೇನಾದರೂ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರೆ, ಮರಣೋತ್ತರ ಪರೀಕ್ಷೆ ನಡೆಸುತ್ತಾರೆ. ಆಗ ಬಾಲಕಿಯ ಅಂಗಾಂಗಗಳನ್ನು ಕದಿಯುತ್ತಾರೆ ಎಂದು ಹೇಳುವ ಮೂಲಕ ತಾಯಿಯನ್ನು ಬೆದರಿಸಿದ್ದಾರೆ.

ಕೊನೆಗೆ ತಾಯಿಯ ಒಪ್ಪಿಗೆ ಇಲ್ಲದೇ ಬಾಲಕಿಯ ದೇಹವನ್ನು ಸುಟ್ಟು ಹಾಕಿದ್ದಾರೆ. ಇದರಿಂದ ಕೋಪಗೊಂಡ ತಾಯಿ ತನ್ನ ಗಂಡನಿಗೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸುಮಾರು 200 ಮಂದಿ ಗ್ರಾಮಸ್ಥರು ಸ್ಮಶಾನಕ್ಕೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅರ್ಚಕನನ್ನು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *