ಬಾಲ್ಯದಲ್ಲಿ ಸಂಗೀತ ಕಲಿಯದಿದ್ರೂ ಗೆದ್ದ ಎಸ್‍ಪಿಬಿ – ತಂದೆಯೇ ಪ್ರೇರಣೆ

Public TV
1 Min Read

ಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ನಟರಷ್ಟೆ ಬೇಡಿಕೆ ಹೊಂದಿದ್ದರು. ಬಾಲ್ಯದಲ್ಲಿ ಸಂಗೀತ ಕಲಿಯದಿದ್ದರೂ ತಂದೆಯ ಪ್ರೇರಣೆಯಿಂದ ಇಂದು ಗಾನ ಗಂಧರ್ವರಾಗಿದ್ದರು. ತಮ್ಮ ಸುಮಧುರ ಹಾಡುಗಳಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿಯಲ್ಲಿ ಬಹುಬೇಡಿಕೆಯ ಗಾಯಕರಾಗಿದ್ದಾರೆ. ಇವರು ಸುಮಾರು 50,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಇದನ್ನೂ ಓದಿ: ಡಾ.ರಾಜ್‍ಕುಮಾರ್ ಅಂದರೆ ಬಾಲುಗೆ ಜೀವಜ್ಜೀವ ಪ್ರೇಮ

ಬಾಲ್ಯ-ವಿದ್ಯಾಭ್ಯಾಸ:
ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಮೂಲ ಹೆಸರು ಶ್ರೀಪತಿ ಪಂಡಿತಾರಾಧ್ಯಲು ಬಾಲಸುಬ್ರಹ್ಮಣ್ಯಂ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕೊನೇಟಮ್ಮ ಪೇಟಾದಲ್ಲಿ 1946ರ ಜೂನ್ 4ರಂದು ಜನಿಸಿದ್ದರು. ಇವರ ತಂದೆ ಎಸ್.ಪಿ.ಸಾಂಬ ಮೂರ್ತಿ ಹರಿಕಥೆ ಕಲಾವಿದರಾಗಿದ್ದು, ತಾಯಿ ಶಾಕುಂತಲಮ್ಮ. ಇವರ ತಾಯಿ 2019ರಲ್ಲಿ ತೀರಿಕೊಂಡಿದ್ದರು. ಇವರಿಗೆ ಇಬ್ಬರು ಸಹೋದರರು, ಎಸ್.ಪಿ.ಶೈಲಜಾ ಸೇರಿದಂತೆ ಐದು ಸಹೋದರಿಯರಿದ್ದರು.

ಎಸ್‍ಪಿಬಿ ಚೆನ್ನೈನ ಜೆ.ಎನ್‍ ಯೂಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ. ಕಾಲೇಜ್‍ನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಹಾಡುಗಳು ಸ್ಪರ್ಧೆಗಳಲ್ಲಿ ಭಾಗವಹಿ, ಮೊದಲ ಪ್ರಶಸ್ತಿ ಗೆದಿದ್ದರು. ತೆಲುಗು ಸಾಂಸ್ಕೃತಿಕ ಸಂಗೀತ ಸ್ಪರ್ಧೆ 1964ರಲ್ಲಿ ಮೊದಲ ಪ್ರಶಸ್ತಿಯನ್ನು ಗೆದ್ದಿದ್ದರು. ಹರಿಕಥೆ ಹೇಳುತ್ತಿದ್ದ ತಂದೆ ಅವರೇ ಬಾಲಸುಬ್ರಹ್ಮಣ್ಯಂ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತನ್ನಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆಗಿದ್ದರು.

ಪ್ರಶಸ್ತಿ ಗೌರವಗಳು-ಪುರಸ್ಕಾರಗಳು
ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಸಂದಿದೆ. ಅಲ್ಲದೇ 25 ಭಾರಿ ಆಂಧ್ರ ಪ್ರದೇಶ ಸರ್ಕಾರದಿಂದ ನಂದಿ ಪ್ರಶಸ್ತಿ ನೀಡಲಾಗಿದೆ. ನಾಲ್ಕು ಭಾಷೆಗಳಾಗಿ ರಾಷ್ಟ್ರಪ್ರಶಸ್ತಿ ಪಡೆದ ಏಕೈಕ ಗಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಜೊತೆಗೆ ಹಲವು ವಿಶ್ವ ವಿದ್ಯಾನಿಲಯಗಳಿಂದ ಡಾಕ್ಟರೇಟ್ ಕೂಡ ಪಡೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *