ಬಾಳೆ ಮಾರಾಟದ ಹಣಕ್ಕಾಗಿ ಗಲಾಟೆ- ವ್ಯಕ್ತಿ ನೇಣಿಗೆ ಶರಣು

Public TV
1 Min Read

ಚಾಮರಾಜನಗರ: ಬಾಳೆ ಮಾರಾಟ ಮಾಡಿದ್ದ ಹಣದ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದ್ದು, ವ್ಯಕ್ತಿ ನೇಣು ಬಿಗಿದುಕೊಂಡಿರುವ ಆಘಾತಕಾರಿ ಘಟನೆ ತಾಲೂಕಿನ ಕೆಲ್ಲಂಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮಹಾದೇವಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಗ್ರಾಮದ ಚೇತನ್ ಗೆ ಮಹಾದೇವಪ್ಪ ಬಾಳೆ ಮಾರಾಟ ಮಾಡಿದ್ದರು. ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿತ್ತು. ಪ್ರಕರಣ ಬಳಿಕ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಪೊಲೀಸ್ ಠಾಣೆಯಲ್ಲಿ ವಿಷದ ಬಾಟಲ್ ಹಿಡಿದು ಮಹಾದೇವಪ್ಪ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ತಡೆದಿದ್ದರು.

ಇದೆಲ್ಲರ ಬಳಿಕ ಪೊಲೀಸ್ ಠಾಣೆಯಿಂದ ಗ್ರಾಮಕ್ಕೆ ವಾಪಸ್ ಆಗಿದ್ದ ಮಹಾದೇವಪ್ಪ, ಚೇತನ್ ತೋಟದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಮಾಡಿ ನೇತು ಹಾಕಿರುವ ಶಂಕೆ ಇದೆ ಎಂದು ಮೃತನ ಪುತ್ರ ಮೋಹನ್ ಆರೋಪಿಸಿದ್ದಾರೆ. ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *