ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ -ಎಚ್‌ಡಿಕೆ

Public TV
1 Min Read

ಮೈಸೂರು: ರಾಜ್ಯದಲ್ಲಿ ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಷವನ್ನು ಬಿ ಟೀಂ ಎಂದು ಪದೇ ಪದೇ ಹೇಳಿ ಬಿಜೆಪಿಗೆ ಹೆಚ್ಚು ಸ್ಥಾನ ಬರುವಂತೆ ಮಾಡಿದರು. ಈಗಲೂ ವಿಪಕ್ಷವಾಗಿ ಕಾಂಗ್ರೆಸ್ ಗಟ್ಟಿಯಾದ ವಿಚಾರ ಹಿಡಿದುಕೊಂಡು ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತಿಲ್ಲ ಎಂದು ದೂರಿದರು.

ಉಪಚುನಾವಣೆಯ ಸೋಲಿನ ಬಗ್ಗೆ ನಡೆದ ಆತ್ಮಾವಲೋಕನಾ ಸಭೆಯಲ್ಲಿ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷವನ್ನು ಹಗರುವಾಗಿ ಕಾಣಬಾರದು ಎಂದು ತಿಳಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಕಾಂಗ್ರೆಸ್ ನ ಸೋಲು, ಗೆಲುವು ಜೆಡಿಎಸ್ ಮೇಲೆ ನಿಂತಿದೆ ಎಂಬುದು ಕಾಂಗ್ರೆಸ್ ನ ಮಾಜಿ ಸಿಎಂ ನ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು.

ಸಿದ್ದರಾಮಯ್ಯ ಯಾರನ್ನು ಯಾವಾಗ ಭೇಟಿ ಮಾಡುತ್ತಾರೆ ಎಂಬುದು ನನಗೆ ಗೊತ್ತು. ಮೊನ್ನೆಯೂ ಅವರು ಯಾರನ್ನು ಎಲ್ಲಿ ಭೇಟಿ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ನಾನು ಸಿಎಂ ಅವರನ್ನು ಭೇಟಿ ಮಾಡಿದರೂ ಕದ್ದು ಮುಚ್ಚಿ ಭೇಟಿ ಮಾಡುವುದಿಲ್ಲ ಎಂದರು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *