ಬಿಜೆಪಿಯವ್ರು ಏನಾದ್ರೂ ಮಾಡ್ಲಿ, ನಮ್ಗೆ ಕೊರೊನಾ ಸಂದರ್ಭದಲ್ಲಿ ಜನ್ರ ಜೀವ ಉಳಿಯಬೇಕು: ಡಿಕೆಶಿ

Public TV
1 Min Read

ಬೆಂಗಳೂರು: ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ. ನಮಗೆ ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯಲಿ ಎಂಬ ವಿಶ್ವನಾಥ್ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದರು. ಇದು ಬಿಜೆಪಿ ಪಾರ್ಟಿ ವಿಚಾರ. ನಮಗೂ ಈ ಪಾರ್ಟಿ ವಿಚಾರಕ್ಕೂ ಸಂಬಂಧವಿಲ್ಲ. ಬಿಜೆಪಿಯವರು ಬಿಎಸ್ ವೈ ನಾದ್ರೂ ಇಟ್ಕೊಳ್ಳಲಿ, ವಿಶ್ವನಾಥ್ ರನ್ನಾದ್ರೂ ಮಾಡಲಿ, ಈಶ್ವರಪ್ಪನವರಾನ್ನಾದ್ರೂ ಮಾಡಿಕೊಳ್ಳಲಿ. ನಮಗೆ ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಯಬೇಕು ಅಷ್ಟೆ ಎಂದರು.

ಕೇಂದ್ರ ಸರ್ಕಾರ ಕೊರೊನಾದಿಂದ ಸತ್ತವರಿಗೆ ಪರಿಹಾರ ಕೊಡುವ ವಿಚಾರ ಮಾಡ್ತಿಲ್ಲ. ರಾಜ್ಯದಲ್ಲಿ ಅನೌನ್ಸ್ ಮಾಡಿದವರಿಗೆ ಪರಿಹಾರ ಸರಿಯಾಗಿ ತಲುಪಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಟ್ಯಾಕ್ಸ್ ಮನ್ನಾ ಮಾಡಿದ್ದಾರೆ. ಇಲ್ಲಿ ಜನರಿಗೆ ಅನುಕೂಲವಾಗೋ ಯಾವ ಕೆಲಸನೂ ಮಾಡಿಲ್ಲ. ಚೆಕ್ ನಮಗೆ ಕೊಡಿ ಒಂದು ರೂಪಾಯಿನೂ ನಾವು ವೇಸ್ಟ್ ಮಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ: ಹೆಚ್. ವಿಶ್ವನಾಥ್

ವಿಶ್ವನಾಥ್ ಒಬ್ಬರೇ ಈ ಮಾತನ್ನು ಆಡಿಲ್ಲ. ಯತ್ನಾಳ್ ಈಶ್ವರಪ್ಪ ಬೇರೆ ಬೇರೆ ಮಿನಿಸ್ಟರ್ ಮಾತಾನಾಡಿದ್ದಾರಲ್ಲ, ನಾವು ಪಾರ್ಟಿ ಇನ್ ಸೈಡ್ ವಿಚಾರಕ್ಕೆ ಹೆಚ್ಚು ಮಾತಾನಾಡಲ್ಲ. ಅರುಣ್ ಸಿಂಗ್ ಅವರೇ ಬಿಎಸ್ ವೈ ಸರ್ಕಾರ ಕೊರೊನಾ ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದೆ ಅಂತೀರಲ್ಲ. 36 ಜನ ಮರ್ಡರ್ ಮಾಡಿದ್ದಾರೆ. ಇಲ್ಲಿ ಒಬ್ಬರ ಮೇಲೂ ಎಫ್ ಐ ಆರ್ ಹಾಕಿಲ್ಲ. ಇದು ಉತ್ತಮ ಕೆಲಸವೇ ಎಂದು ಪ್ರಶ್ನಿಸಿದರು.

ಆಕ್ಸಿಜನ್ ಐಸಿಯು ಇಲ್ಲದೇ ಜನ ಸತ್ತಿದ್ದಾರೆ. ಇದು ಉತ್ತಮ ಕೊರೊನಾ ನಿರ್ವಹಣೆಯೇ..? ಎಲ್ಲದಕ್ಕೂ ಕೋರ್ಟ್ ಮಧ್ಯಪ್ರವೇಶಿಸಿ ನಿಮಗೆ ತರಾಟೆಗೆ ತೆಗೆದುಕೊಂಡಿರೋದು ಎಂದು ಡಿಕೆಶಿ ಅವರು ಅರುಣ್ ಸಿಂಗ್ ವಿರುದ್ಧ ವಾಗ್ಧಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *