ಬಿಜೆಪಿ ಅಭ್ಯರ್ಥಿಗಳ ಪರ ಅಶ್ವಥ್ ನಾರಾಯಣ್ ಪ್ರಚಾರ

Public TV
1 Min Read

ರಾಮನಗರ: ಚನ್ನಪಟ್ಟಣ- ರಾಮನಗರ ನಗರಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಬ್ಯುಸಿಯಾಗಿದ್ದರು.

ನಗರಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಸಿಎಂ, ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಿದರು. ರಾಮನಗರದ ಮದ್ದೂರಮ್ಮ ದೇವಿಗೆ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ ಅಶ್ವಥ್ ನಾರಾಯಣ್ ಅವರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ಸಾರ್ವಜನಿಕರೊಂದಿಗೆ ಮನವಿ ಮಾಡಿಕೊಂಡರು.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಮಧ್ಯದಲ್ಲೇ ನಗರಸಭೆ ಚುನಾವಣೆ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿದ ಡಿಸಿಎಂ ಅವರೊಂದಿಗೆ ನೂರಾರು ಜನರು ಸೇರಿದರು. ಪ್ರಮುಖವಾಗಿ ಮಕ್ಕಳೊಂದಿಗೆ ಸೇರಿಕೊಂಡು ಡಿಸಿಎಂ ಪ್ರಚಾರ ಮಾಡಿದರು. ಇವರಿಗೆ ಬಿಜೆಪಿ ಜಿಲ್ಲಾ ಮುಖಂಡರು ಸಾಥ್ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *