ಬಿಜೆಪಿ ಜನರಲ್ಲಿ ಭರವಸೆ ಮೂಡಿಸಿದೆ: ಜಗದೀಶ್ ಶೆಟ್ಟರ್

Public TV
1 Min Read

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಹುಮತ ಇದೆ. ಅದೇ ರೀತಿ ವಿಧಾನ ಪರಿಷತ್‍ನಲ್ಲಿಯೂ ಬಹುಮತ ಬೇಕಿದೆ. ಪದವೀಧರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬೆಂಬಲಿಸಿ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್ ಅವರು, ಈಗಾಗಲೇ ಜನರು ಬಿಜೆಪಿಯ ಕಾರ್ಯ ವೈಖರಿಯನ್ನು ನೋಡಿದ್ದಾರೆ. ಅಲ್ಲದೇ ಜನರಿಗೆ ಬಿಜೆಪಿಯ ಬಗ್ಗೆ ವಿಶ್ವಾಸವಿದೆ ಎಂದರು. ಕೆಐಎಡಿಬಿ ದರ ಏರಿಕೆ ಕುರಿತು ಮಾತನಾಡಿದ ಅವರು, ನಿರ್ದೇಶನದ ಮೇರೆಗೆ ಪರಿಷ್ಕೃತ ದರವನ್ನು ನಿಗದಿ ಮಾಡಲಾಗಿದೆ. ಈ ಕುರಿತು ಇನ್ನೊಮ್ಮೆ ಪರಿಶೀಲನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆ ಕುರಿತು ಮಾತನಾಡಿದ ಅವರು, ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದ ಅವರು, ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಲೋಕಸಭಾ ಟಿಕೆಟ್ ನನಗೆ ಸಿಕ್ಕರೆ ನನ್ನ ಕುಟುಂಬಸ್ಥರಿಗೆ ವಿಧಾನಸಭೆ ಟಿಕೆಟ್‍ಗಾಗಿ ಬೇಡಿಕೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ಆ ರೀತಿ ಯಾವುದೇ ಚರ್ಚೆಯಾಗಿಲ್ಲ. ಕೇವಲ ಊಹಾಪೋಹಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *