ಬಿಜೆಪಿ, ಜೆಡಿಎಸ್ ವಿಲೀನ ಶುದ್ಧ ಸುಳ್ಳು: ಸಿಎಂ ಬಿಎಸ್‌ವೈ

Public TV
1 Min Read

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ವಿಲೀನ ಸುದ್ದಿ ಶುದ್ಧ ಸುಳ್ಳು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಅರವಿಂದ ಲಿಂಬಾವಳಿ ರಾಜಕೀಯ ಧ್ರುವೀಕರಣ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಜೊತೆ ಜೆಡಿಎಸ್‌ ವಿಲೀನವಾಗುತ್ತಾ ಎಂಬ ಪ್ರಶ್ನೆಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮುಂದೆ ರಾಜಕೀಯ ಧ್ರುವೀಕರಣ, ಒಂದು ಪಕ್ಷವೇ ವಿಲೀನವಾಗಬಹುದು – ಲಿಂಬಾವಳಿ 

ಹೇಳಿಕೆಯಲ್ಲಿ ಏನಿದೆ?
ಮಾನ್ಯ ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ಸರಿಯಷ್ಟೇ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ.

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಾ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ.

Share This Article
Leave a Comment

Leave a Reply

Your email address will not be published. Required fields are marked *