ಬಿಜೆಪಿ ನಂಬಿಕೆ ದ್ರೋಹ ಮಾಡೋ ಪಕ್ಷವಲ್ಲ, ಮೂವರಿಗೆ ಟಿಕೆಟ್ ನೀಡುತ್ತೆ: ಬಿ.ಸಿ ಪಾಟೀಲ್

Public TV
1 Min Read

ಕೊಪ್ಪಳ: ಬಿಜೆಪಿ ನಂಬಿಕೆ ದ್ರೋಹ ಮಾಡುವ ಪಕ್ಷವಲ್ಲ. ಮೂವರಿಗೆ ಟಿಕೆಟ್ ನೀಡುತ್ತೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಕೊಪ್ಪಳ ಕುಷ್ಟಗಿಯಲ್ಲಿ ಡಿಸಿಎಂ ಗೋವಿಂದ್ ಕಾರಜೋಳರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಟಿಬಿ ನಾಗರಾಜ್, ವಿಶ್ವನಾಥ್, ಆರ್ ಶಂಕರ್ ಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ನಾವು ಒತ್ತಾಯ ಮಾಡಿದ್ದೇವೆ ಎಂದರು.

ತಮ್ಮ ಸ್ಥಾನಗಳನ್ನು ತ್ಯಾಗ ಮಾಡಿ, ಸಮ್ಮಿಶ್ರ ಸರ್ಕಾರ ಕೆಡವಿ ಬಂದ ಈ ಮೂವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದೇವೆ. ಪಕ್ಷ ಟಿಕೆಟ್ ನೀಡುತ್ತೆ ಎಂಬ ವಿಶ್ವಾಸವಿದೆ. ಬಿಜೆಪಿ ಪಕ್ಷ ನಂಬಿಕೆ ದ್ರೋಹ ಮಾಡೋಪಕ್ಷ ಅಲ್ಲ ಅವರಿಗೆ ಟಿಕೆಟ್ ನೀಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಮಾತು ಕೊಟ್ಟಿದ್ದಾರೆ. ಮಾತು ಕೊಟ್ಟಂತೆ ಅವರು ನಡೆದುಕೊಳ್ಳುತ್ತಾರೆ. ಮೂವರಿಗೆ ಟಿಕೆಟ್ ನೀಡಲು ಜಾತಿ ಅಡ್ಡ ಬರುತ್ತೆ ಎಂದು ಹೇಳಲಾಗುತ್ತಿದ್ದು ಅದಕ್ಕೆ ಜಾತಿ ಅಡ್ಡ ಬರುವ ವಿಚಾರವಾಗಿ ಪಕ್ಷದಲ್ಲಿ ಯಾರೂ ಪ್ರಸ್ತಾಪ ಮಾಡಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *