ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಪದಗ್ರಹಣ

Public TV
1 Min Read

ನವದೆಹಲಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಇಂದು ಪದಗ್ರಹಣ ಮಾಡಿದರು.

ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷೆ ಪೂನಂ ಮಹಾಜನ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪ್ರದಗ್ರಹಣಕ್ಕೂ ಮುನ್ನ ರಾಷ್ಟ್ರೀಯ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿದ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಅಲ್ಲಿಂದ ಬಿಜೆಪಿ ಪ್ರಧಾನ ಕಚೇರಿಗೂ ರೋಡ್ ಶೋ ಮಾಡಿದರು.

ಪದಗ್ರಹಣದ ಬಳಿಕ ಮಾತನಾಡಿದ ಅವರು, ಹಿರಿಯರ ಆರ್ಶಿವಾದದಿಂದ ಅಧ್ಯಕ್ಷನಾಗಿ ನೇಮಕವಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟನೆಯನ್ನು ಬಲಪಡಿಸಲಿದ್ದೇವೆ ವಿಶ್ವದ ದೊಡ್ಡ ಶಕ್ತಿ ಮಾಡಲು ಪ್ರಯತ್ನ ಮಾಡಿತ್ತೇವೆ. ಡಾ.ಬಿಆರ್ ಅಂಬೇಡ್ಕರ್ ಆರ್ಶಿವಾದ ಪಡೆದಿದ್ದೇನೆ ಸಮಾಜದ ಕಟ್ಟ ಕಡೆಯ ವರ್ಗವನ್ನು ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತೇವೆ. ದೇಶದ ಯುವ ನಾಯಕರನ್ನಾಗಿ ರೂಪಿಸುತ್ತೇವೆ ಎಂದರು. ಇದೇ ವೇಳೆ ಬೆಂಗಳೂರು ದಕ್ಷಿಣದ ಜನರಿಗೆ, ಕರ್ನಾಟಕದ ಜನರಿಗೆ ಧನ್ಯವಾದ ಸಲ್ಲಿಸಿದರು.

ಈ ವೇಳೆ ಮಾತನಾಡಿದ ನಿರ್ಗಮಿತ ಅಧ್ಯಕ್ಷೆ ಪೂನಂ ಮಹಾಜನ್, ಯುವಮೋರ್ಚಾಗೆ ಕನ್ನಡಿಗರು ಅಧ್ಯಕ್ಷರಾಗುತ್ತಿರುವುದು ಇದೇ ಮೊದಲು. ನನ್ನ ತಮ್ಮನಂತಿರುವ ತೇಜಸ್ವಿಗೆ ಅಧಿಕಾರ ಹಸ್ತಾಂತರಿಸುವುದು ಖುಷಿ ಇದೆ. ಭವಿಷ್ಯದ ರಾಜಕಾರಣಕ್ಕೆ ಒಳಿತಾಗಲಿ ಎಂದು ಅಧಿಕಾರ ಹಸ್ತಾಂತರದ ಬಳಿಕ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *