ಬಿಜೆಪಿ ಲಸಿಕೆಯಲ್ಲಿ ನನಗೆ ನಂಬಿಕೆ ಇಲ್ಲ, ನಾನು ಪಡೆಯಲ್ಲ – ಅಖಿಲೇಶ್‌ ಯಾದವ್‌

Public TV
1 Min Read

ಲಕ್ನೋ: ಕೊರೊನಾ ಲಸಿಕೆ ವಿತರಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಈಗ ಇದರಲ್ಲೂ ರಾಜಕೀಯ ಆರಂಭವಾಗಿದೆ. ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್‌ ಯಾದವ್‌ ಬಿಜೆಪಿ ಲಸಿಕೆಯಲ್ಲಿ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ನಾನು ಸದ್ಯಕ್ಕೆ ಲಸಿಕೆ ಹಾಕಲು ಹೋಗುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬುವುದು ಎಂದು ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ರಚನೆಯಾದಾಗ ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇಂದು ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಸಂಬಂಧ ಡ್ರೈ ರನ್‌ ನಡೆಯುತ್ತಿದೆ. ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್ ನೀಡುವ ಕ್ಷಣಗಳು ಹತ್ತಿರವಾಗಿವೆ. ನಿನ್ನೆ ದೆಹಲಿಯಲ್ಲಿ ಸಭೆ ಸೇರಿದ್ದ ಡಿಸಿಜಿಐನ ವಿಷಯ ತಜ್ಞರ ಸಮಿತಿ ಕೋವಿಶೀಲ್ಡ್ ತುರ್ತು ಬಳಕೆಗೆ ಶಿಫಾರಸು ಮಾಡಿದೆ. ಇದಕ್ಕೆ ಈಗ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಡಿಸಿಜಿಐ) ಒಪ್ಪಿಗೆ ನೀಡುವುದು ಮಾತ್ರ ಬಾಕಿ ಉಳಿದಿದೆ. ಡಿಸಿಜಿಐ ಒಪ್ಪಿಗೆ ನೀಡಿದರೆ ಕೋವಿಶೀಲ್ಡ್ ಭಾರತದಲ್ಲಿ ಅನುಮೋದನೆ ಪಡೆದ ಮೊದಲ ಲಸಿಕೆ ಆಗಲಿದೆ.

ಕೋವಿಶೀಲ್ಡ್ ಲಸಿಕೆಯನ್ನು ಆಕ್ಸ್‌ಫರ್ಡ್ ವಿವಿ ಮತ್ತು ಆಸ್ಟ್ರಾಜೆನಿಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ್ದು, ಇದನ್ನು ಪುಣೆಯ ಸಿರಂ ಸಂಸ್ಥೆ ಉತ್ಪಾದಿಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *