ಬಿತ್ತನೆ ಬೀಜಕ್ಕೆ ಆಗ್ರಹಿಸಿ ರೈತರ ಹೋರಾಟ – ಹೆದ್ದಾರಿ ತಡೆದು ಟೈಯರಿಗೆ ಬೆಂಕಿ

Public TV
1 Min Read

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ ಅಧಿಕಾರಿಗಳು ಬಿತ್ತನೆ ಬೀಜ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ಹೋರಾಟ ನಡೆಸಿದ್ದಾರೆ. ರಾಯಚೂರು ಮಸ್ಕಿ ಹೆದ್ದಾರಿ ತಡೆದು ಟೈಯರಿಗೆ ಬೆಂಕಿ ಹಚ್ಚಿ ವಾಹನ ಓಡಾಟ ನಿಲ್ಲಿಸಿದ್ದಾರೆ.

ಮಸ್ಕಿ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳ ವರ್ತನೆಗೆ ಬೇಸತ್ತ ರೈತರು ಇಂದು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಬಿತ್ತನೆಗೆ ಕಡಲೆ ಬೀಜ ನೀಡುತ್ತಿಲ್ಲ ಎಂದು ಆರೋಪಿಸಿರುವ ರೈತರು ಮಸ್ಕಿ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ್ದರು. ವಿವಿಧ ಗ್ರಾಮಗಳ ನೂರಾರು ಜನ ರೈತರು ಕೂಡಲೇ ಬಿತ್ತನೆ ಬೀಜ ನೀಡುವಂತೆ ಒತ್ತಾಯಿಸಿದ್ದಾರೆ.

ದಿನನಿತ್ಯ ಕೇಂದ್ರಕ್ಕೆ ಅಲೆದು ಅಲೆದು ಸುಸ್ತಾಗಿ ಪ್ರತಿಭಟನೆಗೆ ಇಳಿದ ರೈತರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಈ ವರ್ಷ ಉತ್ತಮ ಮಳೆಯಾಗಿದ್ದು, ಸರಿಯಾದ ಸಮಯಕ್ಕೆ ಬಿತ್ತನೆ ಮಾಡಿದರೆ ಉತ್ತಮ ಫಸಲು ಬರುವ ನಿರೀಕ್ಷೆಯಲ್ಲಿರುವ ರೈತರಿಗೆ ಬಿತ್ತನೆ ಬೀಜವೇ ಸಿಗುತ್ತಿಲ್ಲ. ಹೀಗಾಗಿ ಆಕ್ರೋಶಗೊಂಡಿರುವ ರೈತರು ಹೆದ್ದಾರಿ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *