ಬಿಬಿಎಂಪಿ ಎಡವಟ್ಟು- ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆತಂದ ಕುಟುಂಬಸ್ಥರು

Public TV
1 Min Read

ಬೆಂಗಳೂರು: ಕೊರೊನಾ ಸೋಂಕಿತನನ್ನು ಅವರ ಕುಟುಂಬಸ್ಥರೇ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುವ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ನಡೆದಿದೆ.

ಕಳೆದ ಎರಡು ದಿನದ ಹಿಂದೆಯೇ ಸೋಂಕಿತನಿಗೆ ಕರೆ ಮಾಡಿದ್ದ ಬಿಬಿಎಂಪಿಯವರು ನಿಮಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಮನೆಯಲ್ಲೇ ಇರಿ ಅಂಬುಲೆನ್ಸ್ ಬಂದು ಕರೆದುಕೊಂಡು ಬರುತ್ತದೆ ಎಂದಿದ್ದಾರೆ. ಆದರೆ ಎರಡು ದಿನ ಕಳೆದರೂ ಅಂಬುಲೆನ್ಸ್ ಬಾರದ ಕಾರಣ, ಇಂದು ಮನೆಯವರೇ ಸೋಂಕಿತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಯಶವಂತಪುರ ಬಳಿ ಇರುವ ಮೋಹನ್ ಕುಮಾರ್ ನಗರದ 48 ವರ್ಷದ ವ್ಯಕ್ತಿಗೆ ಕೆಮ್ಮು ಜ್ವರ, ಉಸಿರಾಟದ ಸಮಸ್ಯೆ ಇದ್ದ ಕಾರಣ ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಆತನಿಗೆ ಸೋಂಕು ಪಾಸಿಟಿವ್ ಬಂದಿದೆ. ಆಗ ಕರೆ ಮಾಡಿದ ಬಿಬಿಎಂಪಿ ಅಧಿಕಾರಿಗಳು ನಿಮಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಮನೆಯ ಬಳಿ ಅಂಬುಲೆನ್ಸ್ ಕಳಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಎರಡು ದಿನ ಕಳೆದರು ಅಂಬುಲೆನ್ಸ್ ಕಳುಹಿಸಿಲ್ಲ.

ಇಂದು ಸೋಂಕಿತ ಮಾತನಾಡಲು ಆಗದ ಸ್ಥಿತಿಗೆ ತಲುಪಿದ್ದು, ಭಯಭೀತರಾದ ಕುಟುಂಬಸ್ಥರು ತಮ್ಮ ಸ್ವಂತ ಕಾರಿನಲ್ಲೇ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಸೋಂಕಿತ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಬಾವ ಯಶವಂತಪುರ ಠಾಣೆಗೆ ಕರೆತಂದಿದ್ದು, ನಂತರ ಅದೇ ಕಾರಿನಲ್ಲಿ ಕೆಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *