ಬೀದರ್‌ನಲ್ಲಿ ಸಿಡಿಲಿಗೆ ತಾಯಿ, ಮಗಳು ಬಲಿ

Public TV
1 Min Read

ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದ ಸಮಯದಲ್ಲಿ ಸಿಡಿಲು ಬಡಿದು ತಾಯಿ, ಮಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಲಸೂರು ತಾಲೂಕಿನ ಖಾದನಾಪುರ್ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೀಗ 38 ವರ್ಷದ ಭಾಗ್ಯಶ್ರೀ ಭೀಮ್ ಮೇತ್ರ ಹಾಗೂ 6 ವರ್ಷದ ವೈಶಾಲಿ ಸಿಡಿಲಿಗೆ ಬಲಿಯಾಗಿದ್ದಾರೆ. ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದಾಗ ಮಳೆ ಜೋರಾಗಿದ್ದು, ಈ ವೇಳೆ ಸಿಡಿಲು ಬಡಿದಿದೆ.

ಇಂದು ಕೂಡ ಜಿಲ್ಲೆಯಲ್ಲಿ ತುಂತುರು ಮಳೆ ಮುಂದುವರಿದಿದ್ದು, ಮಹಾ ಮಳೆ ಬಂದರೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಲಿದೆ. ಭಾರೀ ಮಳೆಗೆ ಈಗಾಗಲೇ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದು, 17ರ ವರೆಗೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಇನ್ನೂ ಏನೇನು ಅನಹುತ ಕಾದಿದೆಯೋ ಎಂದು ಜನ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *