ಬೆಂಗಳೂರಿನಲ್ಲಿ ಇಂದು ಕೊರೊನಾಗೆ 6 ಬಲಿ, 150ಕ್ಕೇರಿದ ಸಾವಿನ ಸಂಖ್ಯೆ

Public TV
2 Min Read

-120 ಮಂದಿ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸಾವಿನ ಓಟ ಮುಂದುವರಿದಿದ್ದು, ಇಂದು 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 150ಕ್ಕೇರಿದೆ. ಉಳಿದಂತೆ ಅನ್ಯ ಕಾರಣಗಳಿಂದ ನಾಲ್ವರು ಮೃತ ಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 6 ಮಂದಿ ಸಾವನ್ನಪ್ಪಿದ್ದು, ದಕ್ಷಿಣ ಕನ್ನಡ, ಬಳ್ಳಾರಿಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಇತ್ತ ರಾಜ್ಯದಲ್ಲಿ 120 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಸಂಖ್ಯೆ ಒಂದೇ ದಿನ 40 ಪ್ರಕರಣಗಳು ಹೆಚ್ಚಾಗಿದೆ. ಉಳಿದಂತೆ ಒಟ್ಟು 3,563 ಕೋವಿಡ್ ಸೋಂಕಿತ ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದೆ.

ಸಾವನ್ನಪ್ಪಿದವರ ವಿವರ:
1.ರೋಗಿ 6282: ದಕ್ಷಿಣ ಕನ್ನಡ ಜಿಲ್ಲೆಯ 70 ವರ್ಷದ ವೃದ್ಧ. ತೀವ್ರ ಉಸಿರಾಟದ ಸಮಸ್ಯೆ ಜ್ವರ, ಮೈಕೈ ನೋವಿನಿಂದ ಬಳಲುತ್ತಿದ್ದ ಇವರು ಜೂನ್ 10 ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 23 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

2. ರೋಗಿ 7623: ಬೆಂಗಳೂರಿನ 47 ವರ್ಷದ ಮಹಿಳೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಜೂನ್ 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ಜ್ವರ, ಉಸಿರಾಟದ ತೊಂದರೆ, ಕೆಮ್ಮು, ಡಯಾಬಿಟಿಸ್ ಮತ್ತು ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 20ರಂದು ನಿಧನರಾಗಿದ್ದಾರೆ.

3. ರೋಗಿ 8870: ಬೆಂಗಳೂರಿನ 85 ವರ್ಷದ ವದ್ಧೆ. ವಿಷಮ ಶೀತ ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 17ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ, ಹೃದಯ ಸಂಬಂಧ ಕಾಯಿಲೆ ಮತ್ತು ಕಿಡ್ನಿ ಸಮಸ್ಯೆಯಿಂದ ವೃದ್ಧೆ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 22 ರಂದು ನಿಧನರಾಗಿದ್ದಾರೆ.

4. ರೋಗಿ 8996: ಬೆಂಗಳೂರಿನ 81 ವರ್ಷದ ವೃದ್ಧ. ವಿಷಮಶೀತ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದವು. ಜೂನ್ 19ರಂದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಜೂನ್ 22ರಂದು ನಿಧನರಾಗಿದ್ದಾರೆ. ವೃದ್ಧ ರಕ್ತದೊತ್ತಡದಿಂದ ಬಳಲುತ್ತಿದ್ದರು.

5. ರೋಗಿ 9503: ಬೆಂಗಳೂರಿನ 32 ವರ್ಷದ ಪುರುಷ, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 18 ರಂದು ಆಸ್ಪತ್ರೆ ಗೆ ದಾಖಲಾಗಿದ್ದರು. ಅಂದೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ, ಜ್ವರ, ಉಸಿರಾಟದ ತೊಂದರೆ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು.

6. ರೋಗಿ 9508: ಬೆಂಗಳೂರಿನ 67 ವರ್ಷದ ಪುರುಷ, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 20 ರಂದು ಆಸ್ಪತ್ರೆ ಗೆ ದಾಖಲಾಗಿದ್ದರು. ಜೂನ್ 21ರಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜ್ವರ, ಉಸಿರಾಟದ ತೊಂದರೆ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು.

7. ರೋಗಿ 9518: ಬೆಂಗಳೂರಿನ 40 ವರ್ಷದ ಪುರುಷ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 20 ರಂದು ಆಸ್ಪತ್ರೆ ಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 21ರಂದು ಸಾವನ್ನಪ್ಪಿದ್ದಾರೆ. ರಕ್ತದೊತ್ತಡದಿಂದ ಬಳಲುತ್ತಿದ್ದರು.

8. ರೋಗಿ 9679: ಬಳ್ಳಾರಿಯ 85 ವರ್ಷದ ವೃದ್ಧೆ. ತೀವ್ರ ಉಸಿರಾಟದ ತೊಂದರೆ ಮತ್ತು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಜೂನ್ 17ರಂದು ಆಸ್ಪತ್ರೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 22ರಂದು ನಿಧನರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *