ಬೆಂಗಳೂರಿನಲ್ಲಿ ಮುಂದುವರಿದ ರೋಹಿಣಿ ಮಳೆಯ ಅಬ್ಬರ

Public TV
1 Min Read

ಬೆಂಗಳೂರು: ಇಂದು ಸಹ ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮಂಗಳವಾರ ಮತ್ತು ಭಾನುವಾರ ವಾಯುದೇವನ ಜೊತೆ ವರುಣದೇವ ಅಬ್ಬರಿಸಿದ್ದನು.

ಬೆಳಗ್ಗೆ 10 ಗಂಟೆಯಿಂದಲೇ ಚುರುಕ್ ಅನ್ನೋ ರೀತಿಯಲ್ಲಿ ಬಿಸಿಲು ಇತ್ತು. ಮಧ್ಯಾಹ್ನ ಮೂರು ಗಂಟೆಯ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ನಾಲ್ಕು ಗಂಟೆ ಸುಮಾರಿಗೆ ಮಳೆ ಸುರಿಯಲಾರಂಭಿಸಿತ್ತು. ಮೆಜೆಸ್ಟಿಕ್, ಮಲ್ಲೇಶ್ವರಂ, ಮತ್ತಿಕೆರೆ, ಯಶವಂತಪುರ, ಹೆಬ್ಬಾಳ, ಯಲಹಂಕ, ಸಂಪಿಗೆಹಳ್ಳಿ, ಬ್ಯಾಟರಾಯನಪುರ, ಮಾನ್ಯತಾ ಟೆಕ್ ಪಾರ್ಕ್, ಥಣಿಸಂದ್ರ, ರಾಮಮೂರ್ತಿ ನಗರ, ಬಿಇಎಲ್, ಸೋಲದೇವನಹಳ್ಳಿ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ.

ಮಲ್ಲೇಶ್ವರಂ ಪಿಯು ಬೋರ್ಡ್ ಮುಂಭಾಗದಲ್ಲಿ ನಾಲ್ಕು ಕಡೆ ಮರಗಳು ಧರೆಗುರುಳಿವೆ. ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಸರ್ಕಲ್ ಮಾರಮ್ಮ ದೇಗುಲ ಬಳಿ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

Share This Article
Leave a Comment

Leave a Reply

Your email address will not be published. Required fields are marked *