ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ- ಮಹಾರಾಷ್ಟ್ರದ ಗಡಿಯಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

Public TV
1 Min Read

– ಕೊರೊನಾ 3ನೇ ಅಲೆ ಭೀತಿ

ಚಿಕ್ಕೋಡಿ: ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಕೊರೊನಾ 3ನೇ ಅಲೆ ಏಳಲಿದೆ ಎಂದು ತಜ್ಞರು ವರದಿ ನೀಡಿದ್ದಾರೆ. ಮೂರನೇ ಅಲೆಯ ಆತಂಕವಿದ್ದರೂ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ ಮುಂದುವರೆಸಿದೆ.

ಬೆಳಗಾವಿ ಜಿಲ್ಲಾಡಳಿತ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್ ಪೋಸ್ಟ್ ನಿರ್ಮಿಸಿದ್ದು, ಸಿಬ್ಬಂದಿ ಇಲ್ಲದೆ ಚೆಕ್ ಪೋಸ್ಟ್ ಗಳು ಖಾಲಿ ಖಾಲಿಯಾಗಿವೆ. ಹೀಗಾಗಿ ಹೇಳೋರಿಲ್ಲ, ಕೇಳೋರಿಲ್ಲ ಎನ್ನುವಂತಾಗಿದ್ದು, ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಾಹನಗಳು ನುಸುಳುತ್ತಿವೆ.

ನಿರಾತಂಕವಾಗಿ ಸಾವಿರಾರು ಜನ ಬೈಕ್ ಹಾಗೂ ಕಾರ್ ಗಳಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿದ್ದರೂ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತದ ನಿದ್ರಾವಸ್ಥೆಯಲ್ಲಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಗಡಹಿಂಗ್ಲಜ್- ಸಂಕೇಶ್ವರ ಚೆಕ್ ಪೋಸ್ಟ್ ಸಿಬ್ಬಂದಿ ಇಲ್ಲದೇ ಖಾಲಿ ಖಾಲಿಯಾಗಿರುವ ಕಾರಣ ಕೊರೊನಾ ನೆಗೆಟಿವ್ ವರದಿ ಇಲ್ಲದಿದ್ದರೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯದ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *