ಬೇಡಿಕೆಗಳ ಈಡೇರಿಕೆಗೆ ಬೋಂಡಾ, ಬಜ್ಜಿ ಮಾರಿ ಸಾರಿಗೆ ನೌಕರರ ಪ್ರತಿಭಟನೆ

Public TV
1 Min Read

ಹಾವೇರಿ: ಒಂಬತ್ತು ಬೇಡಿಕೆಗಳ ಈಡೇರಿಕೆಗಾಗಿ ಬೋಂಡಾ, ಬಜ್ಜಿ, ಮಿರ್ಚಿ, ಟೀ ಮಾರಾಟ ಮಾಡಿ ಸಾರಿಗೆ ನೌಕರರು ರಾಣೇಬೆನ್ನೂರು ನಗರದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಬಳಿ ವಿನೂತನವಾಗಿ ಪ್ರತಿಭಟಿಸಿದ್ದಾರೆ.

ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ, ಆರೋಗ್ಯ ಭಾಗ್ಯ ವಿಮಾ ಯೋಜನೆ, ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ಜಾರಿ ಸೇರಿದಂತೆ ವಿವಿಧ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಈ ವೇಳೆ ಸಾರಿಗೆ ನೌಕರರು ಬೋಂಡಾ, ಬಜ್ಜಿ, ಮಿರ್ಚಿ, ಟೀ ತಯಾರಿಸಿ ಮಾರಾಟ ಮಾಡುವ ಮೂಲಕ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೇರಿಸುವವರೆಗೆ ದಿನಕ್ಕೊಂದು ರೀತಿಯಲ್ಲಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧಾರ ಮಾಡಿದ್ದು, ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *