ಭತ್ತದ ಪೈರು ನಾಟಿ ಮಾಡಿದ ಶೆಟ್ಟರ್

Public TV
2 Min Read

ಉಡುಪಿ: ಭತ್ತದ ಪೈರು ನಾಟಿ ಮಾಡಿ ಕೃಷಿ ಬೇಸಾಯಕ್ಕೆ ಸರರ್ಕಾರ ಬೆಂಬಲಿಸುವುದಾಗಿ ಉಡುಪಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇದನ್ನೂ ಓದಿ:  ಯತ್ನಾಳ್, ಯೋಗೇಶ್ವರ್ ಖಾಲಿ ಪಾತ್ರೆಗಳು-ಡಿಕೆಶಿ

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಗದ್ದೆ ಪುನರುತ್ಥಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 30 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದೆ. ಗದ್ದೆಗೆ ಹಾಲನ್ನು ಅರ್ಪಿಸಿ ನೇಜಿ ನೇಡುವ ಮೂಲಕ ಯಂತ್ರ ನಾಟಿ ಹಾಗೂ ಕೈ ನಾಟಿಗೆ ಚಾಲನೆ ನೀಡಿದರು. ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು. ಆರೂರು ರಂಜ ಬೈಲಿನಲ್ಲಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಶೆಟ್ಟರ್ ಚಾಲನೆ ನೀಡಿದರು.

ಮಾಧ್ಯಮದವರೊಂದಿಗೆ ಅವರು, ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡುತ್ತಿರುವುದು ದೊಡ್ಡ ದಾಖಲೆಯಾಗಿದೆ. ಸದಾ ಸಮಾಜಮುಖಿಯಾಗಿ ಯೋಚಿಸಿ ಟ್ರಸ್ಟ್‍ನ್ನು ರಚಿಸಿ ಸ್ಥಳೀಯರನ್ನು ಒಳಗುಡಿಸಿಕೊಂಡು ಭೂಮಿಯನ್ನು ಹಸಿರಾಗಿಸುತ್ತಿರುವುದು ಶ್ಲಾಘನೀಯ ಎಂದರು.

ರಾಜ್ಯ ಕೇಂದ್ರ ಸರರ್ಕಾರ ಸದಾ ನಿಮ್ಮೊಂದಿಗಿರುತ್ತದೆ. ಈ ಭಾಗದಲ್ಲಿ ಹಡಿಲು ಭೂಮಿ ಆಂದೋಲನಕ್ಕೆ ಸಹಕರಿಸಿದ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದರು. ಬಿಜೆಪಿ ನಾಯಕರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ನಾಟಿ ಕಾರ್ಯದಲ್ಲಿ ಭಾಗಿಯಾದರು.

Share This Article
Leave a Comment

Leave a Reply

Your email address will not be published. Required fields are marked *