ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು

Public TV
1 Min Read

ಚಿಕ್ಕಮಗಳೂರು: ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾರಿದಿಬ್ಬ ಗ್ರಾಮದಲ್ಲಿ ನಡೆದಿದೆ.

ಮೃತನನ್ನ 18 ವರ್ಷದ ಸಲ್ಮಾನ್ ಎಂದು ಗುರುತಿಸಲಾಗಿದೆ. ಮೃತ ಸಲ್ಮಾನ್ ಮೂಲತಃ ಶಿವಮೊಗ್ಗ ಜಿಲ್ಲೆ ಯುವಕ. ಸ್ನೇಹಿತನ ಜೊತೆ ಬಂದಾಗ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಲ್ಮಾನ್ ನೀರಿನಲ್ಲಿ ಮುಳುಗುತ್ತಿರುವ ದೃಶ್ಯವನ್ನ ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಸಲ್ಮಾನ್ ಸ್ನೇಹಿತ ಕೂಡ ದಡದಲ್ಲೇ ಇದ್ದರೂ ಆತನ ಬದುಕಿಸಲು ಸಾಧ್ಯವಾಗಿಲ್ಲ. ಭದ್ರಾ ಹಿನ್ನೀರಿನ ಈ ಭಾಗದಲ್ಲಿ ಸುಮಾರು 18 ರಿಂದ 20 ಅಡಿ ಆಳವಿದೆ. ಹಾಗಾಗಿ, ಸ್ಥಳೀಯರು ಕೂಡ ಆತನ ಉಳಿಸುವ ಪ್ರಯತ್ನ ಮಾಡಿಲ್ಲ ಎಂದು ಹೇಳಲಾಗಿದೆ.

ಮೃತದೇಹಕ್ಕಾಗಿ ನಿನ್ನೆ ಸಂಜೆಯಿಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳಿಯರು ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಮೃತದೇಹ ಪತ್ತೆಯಾಗಿಲ್ಲ. ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *