ಬಿಜೆಪಿ ಮುಖಂಡನ ಬರ್ಬರ ಹತ್ಯೆ- ಕಾರು ಸಮೇತ ಸುಟ್ಟು ಹಾಕಿದ್ರಾ ದುಷ್ಕರ್ಮಿಗಳು?

Public TV
1 Min Read

ಹೈದರಾಬಾದ್: ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಮೃತದೇಹ ಹೈದರಾಬಾದ್‍ನ ಮೇದಕ್‍ನಲ್ಲಿ ಪತ್ತೆಯಾಗಿದೆ.

ಕಾರೂ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಇದು ಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ:  ಗರ್ಭಿಣಿಯಾದಾಗ ಸೆಕ್ಸ್ ಮೇಲಿನ ಆಸಕ್ತಿ ಕಳೆದುಕೊಂಡೆ: ಕರೀನಾ

ಮೇದಕ್ ಜಿಲ್ಲೆಯ ಎಸ್‍ಪಿ ಚಂದನಾ ದೀಪ್ತಿ ಈ ಬಗ್ಗೆ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್ ಅವರ ಕಾರಿಗೆ ಬೆಂಕಿ ಹಾಕಿದ್ದಾರೆ. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್ ಮೇಲೆ ಶ್ರೀನಿವಾಸ್ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.

ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದೂ ಹೇಳಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರವೇ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *