ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರು ಪ್ರಸ್ತಾಪ – ಕಟೀಲ್ ಸ್ಪಂದನೆ

Public TV
1 Min Read

ಮಂಗಳೂರು: ಜಿಲ್ಲೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವಂತೆ ಬಿಲ್ಲವ ಮುಖಂಡರ ನಿಯೋಗವೊಂದು ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರನ್ನು ಭೇಟಿ ಮಾಡಿದೆ.

ದಕ್ಷಿಣ ಕನ್ನಡದ ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಪೀಠಾದಿ ಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾರ್ಗದರ್ಶನದಲ್ಲಿ ಕಂಕನಾಡಿ ಗರೋಡಿ ಕ್ಷೇತ್ರದ ಅದ್ಯಕ್ಷರಾದ ಶ್ರೀ ಜಿತ್ತರಂಜನ್ ರವರ ನೇತ್ರತ್ವದಲ್ಲಿ ಬಿಲ್ಲವ ಮುಖಂಡರ ನಿಯೋಗವು ನಳಿನ್ ಕುಮಾರ್ ಕಟೀಲ್ ಅವರನ್ನು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಭೇಟಿ ಮಾಡಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿತು.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್‍ರವರು ಮಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರನ್ನು ಇಡುವ ಬಗ್ಗೆ ಈಗಾಗಲೇ ಜಿಲ್ಲೆಯಲ್ಲಿ ಬಹಳಷ್ಟು ಚರ್ಚೆಗಳು ನಡೆಯತ್ತಿದ್ದು, ಬೇರೆ ಹೆಸರುಗಳ ಬಗ್ಗೆಯು ಪ್ರಸ್ತಾಪ ಕೆಲವರು ಮಾಡಿದ್ದಾರೆ. ನಾನು ಕೋಟಿ ಚೆನ್ನಯ್ಯ ಬಗ್ಗೆ ಅಪಾರ ಭಕ್ತಿಯುಳ್ಳವನಾಗಿದ್ದು ಇದರ ಬಗ್ಗೆ ಸರ್ಕಾರ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಸರ್ಕಾರದ ಕಾನೂನು ನಿಯಾಮವಳಿಗಳ ಚೌಕಟ್ಟಿನಲ್ಲಿ ನಡೆಯಬೇಕಾಗಿರುವುದರಿಂದ ಜಿಲ್ಲೆಯ ಎಲ್ಲ ಜನರ ವಿಶ್ವಾಸಗಳಿಸುವುದರ ಜೊತೆಗೆ ನಿರ್ಣಯ ಕೈಗೊಳ್ಳಬೇಕಾಗಿದೆ. ಪೂಜ್ಯ ಕನ್ಯಾಡಿ ಶ್ರೀಗಳ ಮಾರ್ಗದರ್ಶನ ಮತ್ತು ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಒಳಗೊಂಡಂತೆ ಜಿಲ್ಲೆಯ ಎಲ್ಲ ಶಾಸಕರ ಅಭಿಪ್ರಾಯಗಳೊಂದಿಗೆ ಕೋಟಿ-ಚೆನ್ನಯರ ಹೆಸರನ್ನು ಇಡುವ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ಈ ಬಗ್ಗೆ ಯಾವುದೇ ಗೊಂದಲ ಮಾಡದೆ ಎಲ್ಲಾ ಸಮುದಾಯಗಳು ಒಂದು ದಿಕ್ಕಿನಲ್ಲಿ ಹೋಗುವ ಅವಶ್ಯಕತೆ ಇದೆ ಎಂದು ಕಟೀಲ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *