ಮಂಡ್ಯ ಜಿಲ್ಲೆಯಲ್ಲಿ ಆತಂಕ ಹುಟ್ಟಿಸುವ ನಿಗೂಢ ದೃಶ್ಯ – ಸಿಸಿಟಿವಿಯಲ್ಲಿ ಸೆರೆ

Public TV
1 Min Read

ಮಂಡ್ಯ: ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ ಎಂದು ಕೆಲವರು ಹೇಳುತ್ತಾರೆ. ಇಲ್ಲ ಎನ್ನುವ ತರ್ಕಗಳು ಇಂದಿಗೂ ಸಹ ವೈಜ್ಞಾನಿಕವಾಗಿ ಹಾಗೂ ಧಾರ್ಮಿಕವಾಗಿ ನಡೆಯುತ್ತಿವೆ. ಇದರ ಮಧ್ಯೆ ಸಕ್ಕರೆ ನಾಡು ಮಂಡ್ಯದಲ್ಲಿ ಆತ್ಮ ಸಂಚಾರದ್ದು ಎನ್ನಲಾದ ದೃಶ್ಯವೊಂದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಇದನ್ನು ನೋಡಿ ಇದೀಗ ಜನರಲ್ಲಿ ಆತಂಕ ಮನೆ ಮಾಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗವಿನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಇಂತಹದ್ದೆ ಒಂದು ನಿಗೂಢವಾದ ದೃಶ್ಯ ಕಾಣಿಸಿಕೊಂಡಿದ್ದು, ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ನಗುವಿನಹಳ್ಳಿ ಗ್ರಾಮದ ಗೋಪಾಲ್ ಎಂಬವರ ತೋಟದ ಮನೆಯಲ್ಲಿ ಜನವರಿ 31 ರಂದು ಇದ್ದಕ್ಕಿದ್ದ ಹಾಗೆ ಕಪ್ಪು ನೆರಳೊಂದು ಸಂಚಾರ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಕಂಡ ಜನರೆಲ್ಲಾ ಇದು ಆತ್ಮ ಸಂಚಾರ ಮಾಡುವ ದೃಶ್ಯ ಎಂದು ಹೇಳುತ್ತಿದ್ದಾರೆ.

ಗೋಪಾಲ್ ಅವರ ತೋಟದ ಮನೆ ನಗುವಿನಹಳ್ಳಿ ಗ್ರಾಮದ ಹೊರ ಭಾಗದಲ್ಲಿದ್ದು, ಪಕ್ಕದಲ್ಲಿಯೇ ಒಂದು ಹಳ್ಳ ಹರಿಯುತ್ತಿದೆ. ಅಲ್ಲದೇ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಸಹ ಇದೆ. ಇಲ್ಲಿ ಹಲವು ವರ್ಷಗಳ ಹಿಂದೆ ಮಹಿಳೆ ಹಾಗೂ ಯುವಕ ಅಪಘಾತದಿಂದ ಮೃತಪಟ್ಟಿದ್ದರು. ಜೊತೆಗೆ ಓರ್ವ ಕುಡಿದ ಮತ್ತಿನಲ್ಲಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಗಳು ಈಗ ಕಂಡಿರುವ ದೃಶ್ಯಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಗೋಪಾಲ್ ಅವರು ಕಳ್ಳರ ಭಯದಿಂದ ಸಿಸಿಟಿವಿ ಕ್ಯಾಮೆರಾವನ್ನು ತಮ್ಮ ತೋಟದ ಮನೆಯಲ್ಲಿ ಹಾಕಿಸಿದ್ದರು. ಇದೀಗ ಅದೇ ಸಿಸಿಟಿವಿಯಲ್ಲಿ ಕಳ್ಳರ ಬದಲಿಗೆ ಆತಂಕ ಹುಟ್ಟಿಸುವ ದೃಶ್ಯವೊಂದು ಸೆರೆಯಾಗಿರುವುದನ್ನು ನೋಡಿ ಗ್ರಾಮಸ್ಥರಲ್ಲಿ ಒಂದಷ್ಟು ಆತಂಕ ಹುಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *