ಮಂತ್ರಾಲಯದಲ್ಲಿ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ

Public TV
1 Min Read

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಆದರೆ ಸಾರ್ವಜನಿಕರಿಗೆ ಅವಕಾಶವಿಲ್ಲದ ಕಾರಣ ಕೇವಲ ಮಠದ ಸಿಬ್ಬಂದಿ ಮಾತ್ರ ಭಾಗಿಯಾಗಿದ್ದರು.

ರಾಯರ ಮೂಲ ಬೃಂದಾವನ ಹಾಗೂ ವಾದೀಂದ್ರ ತೀರ್ಥರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಪಂಚಾಮೃತ ಅಭಿಷೇಕ ನಡೆಯಿತು.

ಆರಾಧನೆ ಹಿನ್ನೆಲೆ ಶ್ರೀ ಮಠದ ಪ್ರಾಂಗಣದಲ್ಲಿ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಕೇವಲ ಶ್ರೀಮಠದ ಸಿಬ್ಬಂದಿ ಮಾತ್ರ ಭಾಗಿಯಾಗಿದ್ದರು. ಜೂನ್ 22ರಿಂದ ರಾಯರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ನಿಯಮಾವಳಿ ಪ್ರಕಾರ ದರ್ಶನಕ್ಕೆ ಮಠದ ಆಡಳಿತ ಮಂಡಳಿ ಅನುವು ಮಾಡಿಕೊಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *