ಮದುಮಗಳ ಕೈ ಹಿಡಿಯಲು ಹೋಗಿ ಹೆಣವಾದ ರೌಡಿ ಶೀಟರ್

Public TV
1 Min Read

– ಮಸಣವಾದ ಮದುವೆ ಮನೆ

ಯಾದಗಿರಿ: ಮದುವೆ ಮನೆಗೆ ಹೋಗಿ ಮದುಮಗಳ ಕೈ ಹಿಡಿಯಲು ಮುಂದಾದ ರೌಡಿ ಶೀಟರ್, ಆಕೆಯ ತಂದೆ ಮತ್ತು ಸಹೋದರರಿಂದ ಕೊಲೆಯಾಗಿದ್ದಾನೆ. ಈ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಪರಮೇಶ್ವರಪಲ್ಲಿಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೊಹಮ್ಮದ್ ಹನೀಪ್ (34) ಕೊಲೆಯಾದವನಾಗಿದ್ದು, ಈತ ಚಿನ್ನಕಾರ ಗ್ರಾಮದ ರೌಡಿ ಶೀಟರ್. ಆರೋಪಿಗಳನ್ನು ಮದುಮಗಳ ತಂದೆ ತಂದೆ ರಸೂಲ್ ಮತ್ತು ಮಕ್ಕಳಾದ ಗುಲಾಮ್, ಇರ್ಫಾನ್, ಹಾರೂನ್ ಎಂದು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ ಪರಮೇಶ್ವರಪಲ್ಲಿಯ ತನ್ನ ಸಂಬಂಧಿ ರಸೂಲ್ ರ ಮಗಳ ಮದುವೆಗೆ ಹೋಗಿದ್ದ. ಮದುವೆಯಲ್ಲಿ ಅಸಭ್ಯ ವರ್ತನೆ ತೋರಿದ ಮೊಹಮ್ಮದ್, ವೇದಿಕೆ ಮೇಲೇರಿ ಮದುಮಗಳ ಕೈ ಹಿಡಿಯಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಮದುಮಗಳ ತಂದೆ ಮತ್ತು ಸಹೋದರರು, ಮೊಹಮ್ಮದ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಈ ಸಂಬಂಧ ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *