ಮದುವೆಯಾಗಿ ಮೂರೇ ದಿನಕ್ಕೆ ಪ್ರಾಣಬಿಟ್ಟ ನವವಿವಾಹಿತ

Public TV
1 Min Read

ಲಕ್ನೋ: ಮದುವೆಯಾಗಿ ಮೂರೇ ದಿನಕ್ಕೆ ಯುವಕ ಕೊರೊನಾ ಮಾಹಾಮಾರಿಗೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಜಾಟಾನ್ ನಿವಾಸಿ ಅರ್ಜುನ್ ಮದುವೆಯಾಗಿ ಮೂರೇ ದಿನಕ್ಕೆ ಕೊರೊನಾಗೆ ಬಲಿಯಾಗಿದ್ದಾನೆ. ಏ,25 ರಂದು ಅರ್ಜುನ್ ಬಬಲಿ ಎನ್ನುವ ಯುವತಿಯ ಜೊತೆಗೆ ಹಸೆಮಣೆ ಏರಿದ್ದರು. ಮದುವೆ ಮುಗಿಸಿ ಮನೆಗೆ ಬಂದ ದಿನವೇ ಅರ್ಜುನ್ ಆರೋಗ್ಯದಲ್ಲಿ ಏರುಪೇರಾಗಿತ್ತು.

ಅರ್ಜುನ್‍ಗೆ ರಾತ್ರಿ ಜ್ವರ ಕಣಿಸಿಕೊಂಡಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅರ್ಜುನನ್ನು ಕುಟುಂಬಸ್ಥರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೂಡಲೇ ಅರ್ಜುನ್‍ನನ್ನು ಜಿಲ್ಲಾಸ್ಪತ್ರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರ್ಜುನ್ ಆರೋಗ್ಯ ಕ್ಷಿಣಿಸುತ್ತಲೇ ಹೋಯಿತ್ತು.

ಏಪ್ರಿಲ್29 ರಂದು ಆಕ್ಸಿಜನ್ ಕೊರತೆಯಿಂದಾಗಿ ಅರ್ಜುನ್ ಪ್ರಾಣಬಿಟ್ಟುನು. ಮಗನನ್ನು ಕಳೆದುಕೊಂಡ ಕುಟುಂಬ, ಆಗ ತಾನೇ ಹಸೆಮಣೆ ಏರಿದ್ದ ಮಗಳು ಪತಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Share This Article
Leave a Comment

Leave a Reply

Your email address will not be published. Required fields are marked *