ಮದ್ವೆ ಪಾರ್ಟಿ ನೀಡದ ಗೆಳೆಯನನ್ನ ಕೊಂದೇ ಬಿಟ್ರು!

Public TV
1 Min Read

– ಹಿಂದಿನ ದಿನವೇ ಪತ್ನಿಯನ್ನ ಕರೆ ತಂದಿದ್ದ
– ಎಣ್ಣೆ ಪಾರ್ಟಿ ಬೇಕೆಂದು ಹಠ ಹಿಡಿದಿದ್ದ ನಾಲ್ವರು!

ಲಕ್ನೋ: ಮದುವೆ ಆಗಿದ್ದ ಖುಷಿಗೆ ಪಾರ್ಟಿ ನೀಡದ ಗೆಳೆಯನನ್ನ ಆತನ ಕುಚುಕುಗಳೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಪಾಲಿಮುಕಿಮ್ಪುರ ಗ್ರಾಮದಲ್ಲಿ ನಡೆದಿದೆ.

ಬಬ್ಲು ಸೂರ್ಯವಂಶಿ ಕೊಲೆಯಾದ ನವ ವಿವಾಹಿತ. ಪಶು ವ್ಯಾಪಾರಿಯಾಗಿದ್ದ ಬಬ್ಲು ಹಿಂದಿನ ದಿನವೇ ಪತ್ನಿಯನ್ನ ಮನೆಗೆ ಕರೆ ತಂದಿದ್ದನು. ಪತ್ನಿ ಆಗಮನದ ಹಿನ್ನೆಲೆ ಬಬ್ಲು ಸಗ ಖುಷಿಯಲ್ಲಿದ್ದನು. ವಧು ಬಂದ ಮರುದಿನ ಬಬ್ಲು ಗೆಳೆಯನ ಮನೆಗೆ ಹೋಗಿದ್ದಾನೆ. ನಾಲ್ವರು ಗೆಳೆಯರು ಮದುವೆಯಾದ ಖುಷಿಗೆ ಮದ್ಯದ ಪಾರ್ಟಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದ್ರೆ ಬಬ್ಲು ಮದ್ಯದ ಪಾರ್ಟಿ ನೀಡಲು ಒಪ್ಪಿಲ್ಲ.

ಬಬ್ಲು ಪಾರ್ಟಿ ನೀಡಲು ಒಪ್ಪದಿದ್ದಾಗ ಗೆಳೆಯರ ನಡುವೆ ಗಲಾಟೆ ನಡೆದಿದೆ. ಕೊನೆಗೆ ಗೆಳೆಯರೆಲ್ಲರೂ ಸೇರಿ ಚಾಕುವಿನಿಂದ ಬಬ್ಲುವಿನ ಕತ್ತು ಕೊಯ್ದು ಎಸ್ಕೇಪ್ ಆಗಿದ್ದಾರೆ. ತದನಂತರ ಬಬ್ಲು ಕುಟುಂಬಸ್ಥರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಬಬ್ಲುನನ್ನು ಅಲಿಗಢ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಬಬ್ಲುನನ್ನು ಪರೀಕ್ಷಿಸಿ ಮೃತಪಟ್ಟಿರೋದನ್ನ ಖಚಿತ ಪಡಿಸಿದ್ದಾರೆ.

ಎರಡನೇ ಮದುವೆ: ಬಬ್ಲುಗೆ ಏಳು ವರ್ಷಗಳ ಹಿಂದೆ ಪಾಲಿ ಗ್ರಾಮದ ನಾಗಿಣಿ ಎಂಬವರನ್ನ ಮದುವೆಯಾಗಿದ್ದನು. ದಂಪತಿಗೆ ಎರಡು ಮಕ್ಕಳಿವೆ. ಆದ್ರೆ ಕಳೆದ ಎರಡ್ಮೂರು ವರ್ಷಗಳಿಂದ ನಾಗಿಣಿ ಆನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ನಾಗಿಣಿಯೇ ತನ್ನ ಸ್ವಂತ ತಂಗಿ ಜೊತೆ ಪತಿಗೆ ಎರಡನೇ ಮದುವೆ ಮಾಡಿಸಿ ಮನೆಗೆ ಕರೆ ತಂದಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿ, ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *