ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

Public TV
1 Min Read

– ಸುಟ್ಟು ಕರಕಲಾದ ಬೈಕ್‍ಗಳು

ಶಿವಮೊಗ್ಗ: ಕಿಡಿಗೇಡಿಗಳು ನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದಿದ್ದು, ಇಂದು ಕೂಡ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿ ಇಟ್ಟಿದ್ದಾರೆ.

ಗಾಂಧಿಬಜಾರ್ ಪ್ರದೇಶದ ಜ್ಯುವೆಲ್ಲರಿ ಅಂಗಡಿ ಮುಂದೆ ನಿಲ್ಲಿಸಲಾಗಿದ್ದ ಎರಡು ಮೊಪೆಡ್ ಬೈಕ್‍ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದು, ಕಿಡಿಗೇಡಿಗಳ ಕೃತ್ಯದಿಂದಾಗಿ ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ.

ಕಳೆದ ವಾರವಷ್ಟೇ ಮನೆಯ ಮುಂದೆ ನಿಲ್ಲಿಸಲಾಗಿದ್ದ 17 ದ್ವಿಚಕ್ರ ವಾಹನಗಳ ಬ್ಯಾಟರಿಗಳ ಕಳ್ಳತನ, ಸೀಗೆಹಟ್ಟಿ ಬಡಾವಣೆಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಮಾಸುವ ಬೆನ್ನಲ್ಲೇ ಇದೀಗ ಗುರುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ.

ಈ ಘಟನೆ ಕುರಿತು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *