ಮರುಜನ್ಮವಿದ್ದರೆ ಕನ್ನಡನಾಡಲ್ಲಿ ಹುಟ್ಟುವೇ ಎಂದಿದ್ದರು ಎಸ್‍ಪಿಬಿ- ಎಚ್‍ಡಿಕೆ ಸಂತಾಪ

Public TV
1 Min Read

ಬೆಂಗಳೂರು: ಸುಪ್ರಸಿದ್ಧ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

ಟ್ವಿಟ್ಟರಿನಲ್ಲಿ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ ಅವರು, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್‍ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಾ.ರಾಜ್‍ಕುಮಾರ್ ಅಂದರೆ ಬಾಲುಗೆ ಜೀವಜ್ಜೀವ ಪ್ರೇಮ

ಮತ್ತೊಂದು ಟ್ವೀಟ್‍ನಲ್ಲಿ, ಎಸ್‍ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕೊರೊನಾ ಸೋಂಕಿನಿಂದ ಎಸ್‍ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್‍ಪಿಬಿ ಅವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಹೃದಯಿ ಗಾಯಕ ಎಸ್‍ಬಿಗೆ ದರ್ಶನ್, ನಿಖಿಲ್ ಸಂತಾಪ 

Share This Article
Leave a Comment

Leave a Reply

Your email address will not be published. Required fields are marked *