ಮಳೆ, ನೆರೆಯಿಂದ ಮನೆಗಳಿಗೆ ಹಾನಿ- 5 ಲಕ್ಷದವರೆಗೆ ಸರ್ಕಾರ ಪರಿಹಾರ ಘೋಷಣೆ

Public TV
1 Min Read

ಬೆಂಗಳೂರು: ಕೊರೊನಾ ವೈರಸ್ ಮಹಾಮಾರಿಯ ನಡುವೆ ವರುಣ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿ ಸಾಕಷ್ಟು ಹಾನಿಯುಂಟಾಗಿದೆ. ಈ ಹಿನ್ನೆಲೆ ಸರ್ಕಾರ ಕೆಲವೊಂದಷ್ಟು ಪರಿಹಾರಗಳನ್ನು ಘೋಷಿಸಿದೆ.

ಮಳೆ, ನೆರೆ ಹಾನಿಯಿಂದ ಮನೆಗಳಿಗೆ ಹಾನಿಯುಂಟಾಗಿದ್ದು, ಮನೆ ಪುನರ್ ನಿರ್ಮಾಣ ಹಾಗೂ ದುರಸ್ತಿ ಕಾರ್ಯಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ. ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 10 ಸಾವಿರ ರೂ., ಶೇ.75 ಕ್ಕಿಂತ ಹೆಚ್ಚು ಸಂಪೂರ್ಣ ಹಾನಿಯಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ.

ಹಾಗೆಯೇ ಶೇ.25 ರಿಂದ 75 ರಷ್ಟು ಹಾನಿಯಾದ ಮನೆಗಳನ್ನು ಹೊಸದಾಗಿ ಕೆಡವಿ ಕಟ್ಟಲು 5 ಲಕ್ಷ ರೂ, ಶೇ.25 ರಿಂದ 75ರಷ್ಟು ಹಾನಿಯಾದ ಮನೆಗಳ ದುರಸ್ತಿಗೆ 3 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಶೇ.15 ರಿಂದ ಶೇ.25 ರಷ್ಟು ಅಲ್ಪ ಹಾನಿಯಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ.

ಪ್ರವಾಹದಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ಅಭಿವೃದ್ಧಿಪಡಿಸಲಾದ ತಂತ್ರಾಂಶದ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಮನೆ ಹಾನಿಯಾದ ಮಾಹಿತಿಯನ್ನು ವಸತಿ ಇಲಾಖೆಯ ವತಿಯಿಂದ ಹೊರಡಿಸಲಾಗುವ ಮಾರ್ಗಸೂಚಿಯನ್ವಯ ತಂತ್ರಾಂಶದಲ್ಲಿ ದಾಖಲಿಸುವುದಾಗಿ ತಿಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *