ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ

Public TV
1 Min Read

– ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್, ಡಿಕೆಶಿ ರಾಜೀನಾಮೆ ನೀಡಬೇಕು
– ಮುಂದಿನ ಚುನಾವಣೆಯಲ್ಲಿ ಕನಕಪುರದಲ್ಲೇ ಡಿಕೆಶಿ ಸೋಲಿಸುತ್ತೇನೆ

ಬೆಂಗಳೂರು: ನಿನ್ನೆ ಹೇಳಿದಂತೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ದೊಡ್ಡ ಬಾಂಬ್ ಸಿಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನೇರವಾಗಿ ಆರೋಪ ಮಾಡುವ ಮೂಲಕ ಆ ಮಹಾನಾಯಕ ಯಾರೆಂದು ಖಚಿತಪಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ತಮ್ಮ ಸಿಡಿ ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ನಾನು ನಿನ್ನೆ ಹೇಳಿದಂತೆ 4-6 ಗಂಟೆ ಒಳಗೆ ಕೆಲವು ಮಾಹಿತಿ ನೀಡುತ್ತೇನೆ. ಮಹಾನಾಯಕ ಯಾರು ಎಂಬುದನ್ನು ಅವರೇ ಹೇಳಿದ್ದಾರೆ. ಕಿಂಗ್‍ಪಿನ್ ನರೇಶ್ ಗೌಡ ಜೊತೆ ಸಂಪರ್ಕ ಇದೆ ಎಂದು ಒಪ್ಪಿಕೊಂಡಿದ್ದಾರೆ. ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್, ಇಂಥ ಷಡ್ಯಂತ್ರವನ್ನು ಆ ನಾಯಕ ಮಾಡಬಾರದಿತ್ತು. ಆ ನಾಯಕ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಗಾಂ…ಡಿಕೆಶಿಯಂಥ ಗಾಂ….ಇಲ್ಲ. ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡುತ್ತೇನೆ. ಅವನಿಗೆ ಯಾಕೆ ಹೆದರಬೇಕು? ಮುಂದಿನ ಚುನಾವಣೆಯಲ್ಲಿ ಕನಕಪುರದಲ್ಲಿ ನಾನು ಡಿಕೆಶಿ ಸೋಲಿಸುತ್ತೇನೆ. ಕನಕಪುರದಲ್ಲಿ ಡಿಕೆಶಿ ಸೋಲಿಸಲು ಎಲ್ಲ ತಂತ್ರ ಮಾಡುತ್ತೇನೆ. ಡಿಕೆಶಿ ವಿರುದ್ಧ ಇವತ್ತೇ ದೂರು ಕೊಡ್ತೇನೆ, ಡಿಕೆಶಿ ವಿರುದ್ಧ ಎಸ್‍ಐಟಿಗೆ ನೇರವಾಗಿ ದೂರು ಕೊಡುತ್ತೇನೆ. ಕೇಸ್ ನಲ್ಲಿ ಯಾರೆಲ್ಲ ಇದ್ದಾರೆಂದು ತನಿಖೆಯಲ್ಲಿ ಗೊತ್ತಾಗುತ್ತದೆ. ಡಿಕೆಶಿ ವಿರುದ್ಧ ಇನ್ನೂ 11 ದಾಖಲೆ ಇದೆ, ಡಿಕೆಶಿ ರಾಜೀನಾಮೆ ನೀಡಲೇಬೇಕು ಎಂದು ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *