ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮತ್ತೆ ಪುಂಡಾಟಿಕೆ- ರಾಜ್ಯ ಪ್ರವೇಶಿಸಲು ಯತ್ನ

Public TV
1 Min Read

– ಬುದ್ಧಿ ಹೇಳಿ ವಾಪಸ್ ಕಳುಹಿಸಿದ ರಾಜ್ಯದ ಪೊಲೀಸರು

ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಗಡಿಯಲ್ಲಿ ಶಿವಸೇನೆ ಮತ್ತೆ ಪುಂಡಾಟಿಕೆ ಮುಂದುವರಿಸಿದೆ. ಮನಗುತ್ತಿ ಗ್ರಾಮದಲ್ಲಿ ತೆರವುಗೊಳಿಸಿರುವ ಶಿವಾಜಿ ಪ್ರತಿಮೆಯನ್ನು ಮತ್ತೆ ಸ್ಥಾಪಿಸಬೇಕು ಎಂದು ಶಿವಸೇನೆ ಒತ್ತಾಯಿಸಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜ್ಯದ ಮನಗುತ್ತಿ ಗ್ರಾಮಕ್ಕೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವನ ನೇತೃತ್ವದಲ್ಲಿ ಸುಮಾರು ಎಂಬತ್ತುಕ್ಕೂ ಅಧಿಕ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಆದರೆ ಶಿವಸೇನೆ ಕಾರ್ಯಕರ್ತರು ಮನಗುತ್ತಿ ಗ್ರಾಮಕ್ಕೆ ಪ್ರವೇಶ ನೀಡದಂತೆ ಗಡಿಯಲ್ಲಿಯೇ ಶಿವಸೇನೆ ಪುಂಡರನ್ನು ಪೊಲೀಸರು ತಡೆದಿದ್ದಾರೆ.

ಮಹಾರಾಷ್ಟ್ರದ ಗಡಿ ಗ್ರಾಮ ಕವಳಿಕಟ್ಟಿಯಿಂದ ಮನಗುತ್ತಿಗೆ ಪಾದಯಾತ್ರೆ ನಡೆಸಿದ ಶಿವಸೇನೆ ಪುಂಡರು, ಪೋಲಿಸರು ಗಡಿಯಲ್ಲಿ ತಡೆದಿದ್ದಕ್ಕೆ ಅದೇ ಸ್ಥಳದಲ್ಲಿ ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಹದಿನೈದು ದಿನಗಳ ಹಿಂದೆ ಮನಗುತ್ತಿ ಗ್ರಾಮದಲ್ಲಿ ಸ್ಥಳೀಯ ಮರಾಠಿ ಭಾಷಿಕರು ಹಾಗೂ ಮುಖಂಡರು ಒಪ್ಪಿ ಗ್ರಾಮದ ಬೇರೆಡೆಗೆ ಶಿವಾಜಿ ಪ್ರತಿಮೆ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಪ್ರತಿಮೆ ಸ್ಥಾಪನೆ ವಿಳಂಬವಾಗುತ್ತಿದೆ ಎನ್ನುವ ಕುಂಟು ನೆಪ ಹೇಳಿಕೊಂಡು ಶಿವಸೇನೆ ಪುಂಡರು ಗಡಿಯಲ್ಲಿ ಪುಂಡಾಟಿಕೆ ಮೆರೆದಿದ್ದಾರೆ. ಈ ವೇಳೆ ಪೊಲೀಸರು ತಡೆದಿದ್ದಾರೆ. ಇದೀಗ ಹುಕ್ಕೇರಿ ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *