ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್

Public TV
1 Min Read

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿದೆ.

ಆಗಸ್ಟ್ ತಿಂಗಳಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಸಂಂಪತ್ ರಾಜ್ ತಲೆ ಮರೆಸಿಕೊಂಡಿದ್ದರು. ಇಂದು ಸಂಪತ್ ರಾಜ್ ಆಪ್ತ ಗೆಳೆಯ ರಿಯಾಜುದ್ದೀನ್ ಬಂಧನವಾಗಿತ್ತು.

ಸಂಪತ್ ರಾಜ್ ಸೇರಿ ಹಲವು ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಡಿ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ರಿಯಾಜುದ್ದೀನ್ ತನ್ನದೇ ಕಾರಿನಲ್ಲಿ ಆರೋಪಿಗಳನ್ನು ನಾಗರಹೊಳೆ ಬಳಿಯ ಫಾರ್ಮ್ ಹೌಸ್‍ಗೆ ಕರೆದೊಯ್ದಿದ್ದ ಎಂಬ ವಿಚಾರ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *