ಮಾಜಿ ಸಚಿವೆ ಉಮಾಶ್ರೀಗೆ ಸೇರಿದ ಕಾರು ಅಪಘಾತ – ಇಬ್ಬರ ದಾರುಣ ಸಾವು

Public TV
1 Min Read

ಹುಬ್ಬಳ್ಳಿ: ಮಾಜಿ ಸಚಿವೆ  ಉಮಾಶ್ರೀ ಅವರಿಗೆ ಸೇರಿದ ಕಾರು ಹಾಗೂ ಇನ್ನೊಂದು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟವರಲ್ಲಿ ಓರ್ವನನ್ನು ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೊಬ್ಬನ ಗುರುತು ಪತ್ತೆ ಆಗಿಲ್ಲ. ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಬಲೆನೋ ಕಾರಿನಲ್ಲಿದ್ದವರಾಗಿದ್ದಾರೆ.

ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು, ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *