ಮಾಸ್ಕ್ ಹಾಕಲು ಹೇಳಿದ ಪಿಡಿಒ ಮೇಲೆ ಹಲ್ಲೆ – ಆರೋಪಿ ಬಂಧನ

Public TV
1 Min Read

ಧಾರವಾಡ: ಮಾಸ್ಕ್ ಹಾಕಿಕೊಳ್ಳಿ ಎಂದಿದ್ದ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೋರ್ವ ಹಲ್ಲೆ ನಡೆಸಿದ ಘಟನೆ ನಿನ್ನೆ ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿತ್ತು. ಇಂದು ಪಿಡಿಒ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಮಾಡಿದ ವ್ಯಕ್ತಿಯನ್ನು ನವೀನ್ ಕೊಟ್ಟಳ್ಳಿ ಎಂದು ಗುರುತಿಸಲಾಗಿದೆ. ನಿನ್ನೆ ಗ್ರಾಮದ ಮೈದಾನದಲ್ಲಿ ಕ್ರಿಕೆಟ್ ಆಡುವಾಗ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ, ನವೀನ್ ಕೊಟ್ಟಳ್ಳಿ ಎಂಬುವನಿಗೆ ಕ್ರಿಕೆಟ್ ಆಡುವುದನ್ನು ನಿಲ್ಲಿಸಿ ಮಾಸ್ಕ್ ಹಾಕಿಕೊಳ್ಳಲು ಹೇಳಿದ್ದರು. ಇದರಿಂದ ಕೆರಳಿದ ನವೀನ್ ಕರ್ತವ್ಯ ನಿರತ ಪಿಡಿಒ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದನು.

ಬುದ್ಧಿ ಹೇಳಿದ್ದಕ್ಕೆ ನವೀನ್ ಕೊಟ್ಟಳ್ಳಿ ನನ್ನ ಮೇಲೆ ಹಲ್ಲೆ ಮಾಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾನೆ ಎಂದು ಘಟನೆಯ ಬಳಿಕ ಪಿಡಿಒ ಮೃತ್ಯುಂಜಯ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಹಿನ್ನೆಲೆ ಪೊಲೀಸರು ಇಂದು ನವೀನ್ ಮೇಲೆ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಅಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *