ಮೂವರು ಬಿಜೆಪಿ ಮುಖಂಡರನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು

Public TV
1 Min Read

ಶ್ರೀನಗರ: ಉಗ್ರರ ಗುಂಡಿನ ದಾಳಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ)ಯ ಮೂವರು ಮುಖಂಡರು ಬಲಿಯಾದ ಘಟನೆ ಕುಲ್ಗಾಂ ಜಿಲ್ಲೆಯ ಖಾಜಿಗುಂಡ್‍ನ ವೈ ಕೆ ಪೊರಾ ಪ್ರದೇಶದಲ್ಲಿ ನಡೆದಿದೆ.

ಗುರುವಾರ ಸಂಜೆ ಈ ಘಟನೆಯಲ್ಲಿ ಕುಲ್ಗಾಂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್, ಉಮರ್ ರಶೀದ್ ಮತ್ತು ಉಮರ್ ರಂಜಾನ್ ಮೃತಪಟ್ಟಿದ್ದಾರೆ.

ಉಗ್ರರು ವೈ ಕೆ ಪೊರಾದಲ್ಲಿ ಮೂವರ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರನ್ನು ಖಾಜಿಗುಂಡ್‍ನ ತುರ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಸಾವನ್ನಪಿದ್ದಾರೆ.

ತಮ್ಮ ಕಾರ್ಯಕರ್ತರ ಮೇಲಿನ ದಾಳಿಯನ್ನು ಬಿಜೆಪಿ ಖಂಡಿಸಿದೆ. ಇತ್ತ ದಾಳಿಕೋರರನ್ನು ಬಂಧಿಸಲು ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ನಡೆಸಿದೆ. ಇತ್ತೀಚೆಗೆ ಕಾಶ್ಮೀರದಲ್ಲಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಹಲವು ನಾಯಕರ ಮೇಲೆ ಹಲ್ಲೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *