ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತರು ಬರುವುದು ಬೇಡ: ಶ್ರೀವೆಂಕಪ್ಪ ಒಡೆಯರ್ ಮನವಿ

Public TV
1 Min Read

ಬಳ್ಳಾರಿ: ಕೊರೊನಾ ದಿನೇ ದಿನೇ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಸುಪ್ರಸಿದ್ಧ ದೇವಾಲಯ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ.

ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕು ಮೈಲಾರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತರು ಹೆಚ್ಚು ಬರುತ್ತಲೇ ಇದ್ದಾರೆ. ಹೀಗಾಗಿ ದೇವಸ್ಥಾನಕ್ಕೆ ಬರಬೇಡಿ ಎಂದು ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಮನವಿ ಮಾಡಿಕೊಂಡಿದ್ದಾರೆ.

ಐತಿಹಾಸಿಕ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವರಿಗೆ ಮಹಾರಾಷ್ಟ್ರ, ಆಂಧ್ರಪ್ರದೇಶದ ಹಾಗೂ ಬೆಂಗಳೂರು ಸೇರಿದಂತೆ ಲಕ್ಷಾಂತರ ಭಕ್ತರು ಇದ್ದಾರೆ. ಹಾಗಾಗಿ ಭಕ್ತರು ದೇವಸ್ಥಾನಕ್ಕೆ ಬಂದು ದೇವರ ದರ್ಶನ ನಿಷೇಧ ಮಾಡಲಾಗಿದೆ. ಮನೆಯಲ್ಲಿ ಭಕ್ತರು ಮೈಲಾರಲಿಂಗೇಶ್ವರ ದೇವರ ಪೂಜೆ ಮಾಡಿ, ಕೊರೊನಾ ಸೋಂಕು ಕಡಿಮೆ ಆದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತೇವೆ. ದೇವಸ್ಥಾನದ ಲಕ್ಷಾಂತರ ಭಕ್ತರು ಸಹಕರಿಸಲು ದೇವಸ್ಥಾನದ ಧರ್ಮದರ್ಶಿ ಶ್ರೀವೆಂಕಪ್ಪ ಒಡೆಯರ್ ಮನವಿ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *