ಮೈಸೂರಿನಲ್ಲಿ ಶಾಶ್ವತ ವಸ್ತು ಪ್ರದರ್ಶನಕ್ಕೆ ಚಿಂತನೆ: ಸಿಎಂ

Public TV
1 Min Read

ಮೈಸೂರು: ವಸ್ತು ಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಾಂಪ್ರದಾಯಿಕ ಆಚರಣೆಗೆ ಬ್ರೇಕ್ ಹಾಕಿ ಪೀಠಾರೋಹಣ ಮಾಡಿದ ಮುರುಘಾ ಶರಣರು

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂಧ ನಾಲ್ಕು ದಿನಗಳ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *