ಮೋದಿಗೆ ಕರ್ನಾಟಕದಿಂದ ನೀಡಿದ್ದ ಕೋದಂಡರಾಮ ಪ್ರತಿಮೆ ಗಿಫ್ಟ್

Public TV
1 Min Read

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ ಅವರಿಗೆ ಕರ್ನಾಟಕದಿಂದ ರವಾನೆಯಾಗಿದ್ದ ಕೋದಂಡರಾಮನ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಲಾಗಿದೆ.

ಇಂದು ಮಧ್ಯಾಹ್ನ 12.44 ರ ಶುಭ ಅಭಿಜಿನ್ ಲಗ್ನದ ಶತಾಭಿಷ ನಕ್ಷತ್ರದ ಮುಹೂರ್ತದಲ್ಲಿ ಪ್ರಧಾನಿ ಮೋದಿ ಅವರು ಭೂಮಿ ಪೂಜೆ ಮುಗಿಸಿದರು. ನಂತರ 40 ಕೆಜಿಯ ಬೆಳ್ಳಿ ಇಟ್ಟಿಗೆಯನ್ನು ಇಟ್ಟು ಮಂದಿರಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ. ಹೀಗಾಗಿ ಈ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ನರೇಂದ್ರ ಮೋದಿ ಹಾಗೂ ಗಣ್ಯರಿಗೆ ಕರ್ನಾಟಕದಿಂದ ಕಳುಹಿಸಲಾಗಿದ್ದ ಮೂರ್ತಿ ನೀಡಲಾಗಿದೆ.

ಕೋದಂಡರಾಮ ಪ್ರತಿಮೆ ಶಿಲ್ಪಿ ಕೈಯಲ್ಲಿ ಅರಳಿದ್ದು, ದೇಶ ಕಾಯುತ್ತಿದ್ದ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗೆ ಸಾಕ್ಷಿಯಾಗಿದೆ. ನಾಗದೇವನಹಳ್ಳಿಯ ಕೆಂಗೇರಿ ನಿವಾಸಿ ರಾಮಮೂರ್ತಿ ಅವರು ಈ ಪ್ರತಿಮೆಯನ್ನು ತಯಾರಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ರಮಕ್ಕೆ ಮುನ್ನ ಈ ಮೂರ್ತಿಗಳು ಉತ್ತರ ಪ್ರದೇಶಕ್ಕೆ ತಲುಪಿದ್ದವು.

ಉತ್ತರ ಪ್ರದೇಶ ಸರ್ಕಾರದ ಬೇಡಿಕೆ ಮೇರೆಗೆ ಕೋದಂಡರಾಮನ ಪ್ರತಿಮೆಯನ್ನು ಮಾಡಲಾಗಿತ್ತು. ಜುಲೈ 31 ರಂದು ರಾಮ, ಲವ, ಕುಶ ಮೂರು ಮೂರ್ತಿಗಳು ರವಾನೆಯಾಗಿದ್ದವು. ಇಂದು ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರಿಗೆ ಉಡುಗೊರೆಯಾಗಿ ನೀಡಲಾಗಿದೆ.

ತೇಗದ ಮರದಿಂದ ರಾಮ ಮೂರ್ತಿಯನ್ನು ಮಾಡಲಾಗಿದೆ. ಕೋದಂಡರಾಮನ ಪ್ರತಿಮೆ ಮೂರು ಅಡಿ ಇದೆ. ಲವ-ಕುಶ ಒಂದೂವರೆ ಅಡಿ, ಮತ್ತೊಂದು ರಾಮನ ಮೂರ್ತಿ ಒಂದೂವರೆ ಅಡಿ ಇದೆ.

Share This Article
Leave a Comment

Leave a Reply

Your email address will not be published. Required fields are marked *