ಮೋದಿ ಕ್ಯಾಬಿನೆಟ್‍ನಿಂದ ರವಿಶಂಕರ್ ಪ್ರಸಾದ್, ಜಾವಡೇಕರ್ ಔಟ್

Public TV
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂಪುಟ ಪುನಾರಚನೆಯ ಹಿನ್ನೆಲೆಯಲ್ಲಿ ಘಟಾನುಘಟಿ ಮಂತ್ರಿಗಳು ರಾಜೀನಾಮೆ ನೀಡಿದ್ದಾರೆ.

ಇಂದು 43  ಸಂಸದರು ಪ್ರತಿಜ್ಞಾ ವಿಧಿ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಯಾರೆಲ್ಲ ರಾಜೀನಾಮೆ ನೀಡಲಿದ್ದಾರೆ ಎಂಬ ಕುತೂಹಲ ಮೂಡಿತ್ತು. ಸಂಜೆಯ ವೇಳೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್, ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ರವಿಶಂಕರ್ ಪ್ರಸಾದ್ ರಾಜೀನಾಮೆ ನೀಡಿದ್ದಾರೆ.

ಕೋವಿಡ್ 19 ಸರಿಯಾಗಿ ಸರಿಯಾಗಿ ನಿಭಾಯಿಸದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಹರ್ಷವರ್ಧನ್, ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ನೋಡಿಕೊಳ್ಳುತ್ತಿದ್ದ ಸದಾನಂದ ಗೌಡ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ: ಭಾವುಕರಾದ ನಾರಾಯಣಸ್ವಾಮಿ


ಸಂಪುಟದಿಂದ ಔಟ್
ಕ್ಯಾಬಿನೆಟ್ ಸಚಿವರು
ಹರ್ಷ ವರ್ಧನ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ರವಿಶಂಕರ್ ಪ್ರಸಾದ್ – ಮಾಹಿತಿ ಮತ್ತು ತಂತ್ರಜ್ಞಾನ
ರಮೇಶ್ ಪೋಖ್ರಿಯಾಲ್ – ಶಿಕ್ಷಣ
ಪ್ರಕಾಶ್ ಜಾವಡೇಕರ್ – ಪರಿಸರ ಮತ್ತು ಅರಣ್ಯ ಸಚಿವ
ಸಂತೋಷ್ ಗಂಗ್ವಾರ್ – ಕಾರ್ಮಿಕ
ಸದಾನಂದ ಗೌಡ – ರಾಸಾಯನಿಕ ಮತ್ತು ರಸಗೊಬ್ಬರ

ರಾಜ್ಯ ಖಾತೆ ಸಚಿವರು
ಬಾಬುಲ್ ಸುಪ್ರಿಯೋ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
ಸಂಜಯ್ ಧೋತ್ರೆ – ಶಿಕ್ಷಣ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ
ರಾವಾಸಾಹೇಬ್ ಪಾಟೀಲ್ ದನ್ವೆ – ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ
ರತನ್ ಲಾಲ್ ಕಟಾರಿಯಾ – ಜಲ ಶಕ್ತಿ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ಪ್ರತಾಪ್ ಚಂದ್ರ ಸಾರಂಗಿ – ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ
ದೇಬಶ್ರೀ ಚೌಧುರಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಥಾವರ್ ಚಂದ್ ಗೆಹ್ಲೋಟ್- ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ

Share This Article
Leave a Comment

Leave a Reply

Your email address will not be published. Required fields are marked *