ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ: ನಡ್ಡಾ

Public TV
1 Min Read

ಪಣಜಿ: ರಾಜ್ಯದಲ್ಲಿ ನಾಯತ್ವ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಚ್ಚರಿಯ ಹೇಳಿಕೆ ನೀಡಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಗೋವಾದಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವದದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ನೋಡುತ್ತಿದ್ದೇವೆ. ರಾಜಕೀಯ ಬೆಳವಣಿಗೆ ಹಾಗೂ ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಮುರುಗೇಶ್ ನಿರಾಣಿಯವರು ದೆಹಲಿಗೆ ಹಾರಿದ್ದು, ಇತ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಬೆಂಗಳೂರಿನಲ್ಲಿದ್ದರೂ ಅಜ್ಞಾತ ಸ್ಥಳದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಸಿಎಂ, ಬೆಳಗಾವಿಯ ಪ್ರವಾಹ ಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಹೈಕಮಾಂಡ್‍ಗೆ ಶಾಕ್ ನೀಡಿದ್ರಾ ಅನ್ನೋ ಪ್ರಶ್ನೆ ಮುನ್ನಲೆಗೆ ಬಂದಿದೆ. ಇಂದು ಮೂರು ಬಾರಿ ಒಂದೇ ಹೇಳಿಕೆ ನೀಡಿರುವ ಸಿಎಂ ಬಿಎಸ್‍ವೈ, ಕಾದು ನೋಡೋಣ ಅಂತ ಹೇಳುವ ಮೂಲಕ ಹೈಕಮಾಂಡ್‍ಗೆ ಸಂದೇಶ ರವಾನಿಸಿದ್ರಾ ಎಂಬ ಚರ್ಚೆಗಳು ಕಮಲ ಪಾಳಯದಲ್ಲಿ ಆರಂಭಗೊಂಡಿವೆ.

ಕಾದು ನೋಡೋಣ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ನಮ್ಮ ಪರವಾಗಿದ್ದಾರೆ. ನಮ್ಮ ಅಭಿಮಾನಿಗಳು ಯಾರೂ ಆತಂಕಕ್ಕೊಳಗಾಗಬಾರದು ಎಂದು ಧೈರ್ಯ ತುಂಬಿದ್ದಾರೆ. ಸಿಎಂ ಈ ಹೇಳಿಕೆ ಬಿಜೆಪಿ ಪಾಳಯದಲ್ಲಿ ಅಚ್ಚರಿ ಮೂಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *