ಯಾರಿಗೂ ಸಚಿವ ಸ್ಥಾನ ಕೊಡಿಸಲು ದೆಹಲಿಗೆ ಬಂದಿಲ್ಲ: ರಮೇಶ್ ಜಾರಕಿಹೊಳಿ

Public TV
1 Min Read

ನವೆದೆಹಲಿ: ನಾನು ಯಾರಿಗೂ ಸಚಿವ ಸ್ಥಾನ ಕೊಡಿಸಲು ದೆಹಲಿಗೆ ಬಂದಿಲ್ಲ. ಇಲಾಖೆ ಕಾರ್ಯಗಳ ಹಿನ್ನೆಲೆ ದೆಹಲಿಗೆ ಆಗಮಿಸಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿಎಂ ಆಗಮನದ ವಿಚಾರ ನನಗೆ ಗೊತ್ತಿರಲಿಲ್ಲ. ನಾನು ಬಂದ ಬಳಿಕ ಸಿಎಂ ದೆಹಲಿಗೆ ಬಂದಿದ್ದಾರೆ. ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ಜಲ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಆದ್ರೆ ನಿನ್ನೆ ಸಿಎಂ ನಿಗದಿತ ಸಮಯಕ್ಕಿಂತ ಬೇಗ ಬೆಂಗಳೂರಿಗೆ ವಾಪಸ್ ಆಗಿದ್ದರಿಂದ ಅವರನ್ನು ದೆಹಲಿಯಲ್ಲಿ ಭೇಟಿಯಾಗಲು ಸಾಧವಾಗಲಿಲ್ಲ ಎಂದರು.

ಸಿಎಂ ಅವರನ್ನು ಉದ್ದೇಶ ಪೂರ್ವಕವಾಗಿ ಭೇಟಿ ಮಾಡಿಲ್ಲ ಎನ್ನುವುದು ಸುಳ್ಳು. ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ಬೇಡ ಎನ್ನುವುದು ಕೆಲವರ ಅಭಿಪ್ರಾಯ. ಸಚಿವ ಸ್ಥಾನ ಯಾರಿಗೆ ನೀಡಬೇಕು ಎನ್ನುವುದು ಅಂತಿಮವಾಗಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.

 

Share This Article
Leave a Comment

Leave a Reply

Your email address will not be published. Required fields are marked *