ಯಾರ ನಾಯಕತ್ವವೇ ಆಗಲಿ, ಐದು ವರ್ಷ ಸರ್ಕಾರ ಇರಲಿ: ಬಾಲಕೃಷ್ಣ

Public TV
1 Min Read

ಹಾಸನ: ಐದು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆದರೂ ನಮಗೆ ತೊಂದರೆ ಇಲ್ಲ. ಆದರೆ ಸರ್ಕಾರ ಐದು ವರ್ಷ ಪೂರೈಸಲಿ ಎಂದು ಹಾಸನ ಜಿಲ್ಲೆ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದ್ದಾರೆ.

ಹಾಸನದ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಬಾಲಕೃಷ್ಣ, ಮುಖ್ಯಮಂತ್ರಿ ಬದಲಾವಣೆ ವಿಚಾರ ನಮ್ಮ ಪಕ್ಷದ ಚೌಕಟ್ಟಿನ ವಿಚಾರವಲ್ಲ. ಹೀಗಾಗಿ ಅದರ ಬಗ್ಗೆ ಮಾತನಾಡಲ್ಲ. ಆದರೆ ಸರ್ಕಾರ ಐದು ವರ್ಷ ಪೂರೈಸಲಿ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲಿ. ಕೊರೊನಾದಿಂದ ಅಭಿವೃದ್ಧಿ ಕುಂಠಿತವಾಗಿದೆ. ಇನ್ನೇನು ಕೊರೊನ ಎರಡನೇ ಅಲೆ ಮುಗಿಯುತ್ತಾ ಬಂದಿದೆ. ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಹತ್ತು ಕೋಟಿ ಅನುದಾನದಲ್ಲಿ ಆರು ಕೋಟಿ ಅನುದಾನ ನೀವು ತೆಗೆದುಕೊಂಡರೆ, ನಾಲ್ಕು ಕೋಟಿಯಷ್ಟನ್ನಾದರು ನಮಗೆ ಕೊಡಿ. ಇದರಲ್ಲಿ ತಾರತಮ್ಯ ಮಾಡಬೇಡಿ ಎಂದರು. ಇದನ್ನೂ ಓದಿ: ಸಿಎಂ ರೇಸ್‍ನಲ್ಲಿ ಸ್ಲೈಡಿಂಗ್ ಆಗಲು ಹೋಗಲ್ಲ: ಆರ್.ಅಶೋಕ್

ಇಂದಿನ ವಿದ್ಯಮಾನ, ಚರ್ಚೆ ಒಳಿತಾಗುತ್ತದೋ, ಇಲ್ಲವೋ ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಒಟ್ಟಾರೆ ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿದೆ. ಈಗ ಅವರ ಪಕ್ಷದಲ್ಲೇ ಕೆಸರೆರೆಚಾಟ ಆಗುತ್ತಿದೆ. ಯಡಿಯೂರಪ್ಪ ಅವರು ಹಿರಿಯರಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಅವರ ಪಕ್ಷದಲ್ಲೇ ಪರ ವಿರೋಧ ಮಾತನಾಡುತ್ತಿದ್ದಾರೆ. ಆದರೆ ನಾವು ಅವರ ಪಕ್ಷದ ವಿಚಾರದ ಬಗ್ಗೆ ಮಾತನಾಡಲ್ಲ. ಐದು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆದರೂ ನಮಗೆ ತೊಂದರೆ ಇಲ್ಲ. ಆದರೆ ಯಾರೇ ಮುಖ್ಯಮಂತ್ರಿ ಆದರೂ ಒಳ್ಳೆಯ ಆಡಳಿತ ನೀಡಲಿ ಎಂಬುದಷ್ಟೇ ನಮ್ಮ ಆಶಯ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *