ಯುವಕನೊಂದಿಗೆ ಸಂಬಂಧ ಹೊಂದಿದ್ದಾಗ ರೆಡ್ ಹ್ಯಾಂಡಾಗಿ ತಂದೆ, ಮಗನಿಗೆ ಸಿಕ್ಕಿಬಿದ್ಲು- ಇಬ್ಬರ ಬರ್ಬರ ಕೊಲೆ

Public TV
1 Min Read

ವಿಜಯಪುರ: ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ತಾಲೂಕಿನಲ್ಲಿ ನಡೆದಿದೆ.

ಅಮರನಾಥ್ ಸೊಲ್ಲಾಪುರ (25) ಮತ್ತು ಸುನಿತಾ ತಳವಾರ (35) ಕೊಲೆಯಾದವರು. ವಿಜಯಪುರ ತಾಲೂಕಿನ ಅಲಿಯಾಬಾದ್ ಗ್ರಾಮದ ತೋಟದ ಮನೆಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕೊಡಲಿಯಿಂದ ಕೊಚ್ಚಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸುನಿತಾ ಪತಿ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಈಕೆಯ ಜೊತೆ ಯುವಕ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಮಂಗಳವಾರ ರಾತ್ರಿ ಅಮರನಾಥ್ ಮಹಿಳೆಯ ಮನೆಗೆ ಬಂದಿದ್ದಾನೆ. ಈ ವೇಳೆ ಇಬ್ಬರು ತೋಟದ ಮನೆಯಲ್ಲಿ ಅಕ್ರಮ ಸಂಬಂಧ ಹೊಂದಿದ್ದರು. ಆದರೆ ಸುನಿತಾ ತಂದೆ ರಾಮಗೊಂಡ ಮತ್ತು ಅಪ್ರಾಪ್ತ ಮಗ ಮನೆಗೆ ಬಂದಿದ್ದಾರೆ. ಆಗ ಇವರಿಬ್ಬರು ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವುದನ್ನು ನೋಡಿದ್ದಾರೆ.

ಇದರಿಂದ ಸುನಿತಾ ತಂದೆ ಮತ್ತು ಅಪ್ರಾಪ್ತ ಮಗ ಕೋಪಗೊಂಡಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇಬ್ಬರನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಇಂದು ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ವಯಸ್ಸಿನ ಮಗ ಹಾಗೂ ಆಕೆಯ ತಂದೆ ರಾಮಗೊಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *