ರಸ್ತೆಯಲ್ಲಿ ಕಾದು ಕುಳಿತ ಸೋಂಕಿತ- ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಯು.ಟಿ.ಖಾದರ್

Public TV
1 Min Read

ಮಂಗಳೂರು: ಅಂಬುಲೆನ್ಸ್ ನಲ್ಲಿ ಅರ್ಧ ಗಂಟೆ ಕಾದು ಕೂತಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ.

ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದು ನಂತರ ಜಿಲ್ಲಾಡಳಿತ ಅನುಮತಿ ಇರದ ಕಾರಣ ಪ್ರವೇಶ ನಿರಾಕರಣೆ ಮಾಡಲಾಗಿತ್ತು. ಹೀಗಾಗಿ ಕೋವಿಡ್-19 ಸೋಂಕಿತ ಕರೆತಂದ ಆಂಬ್ಯುಲೆನ್ಸ್‍ನಲ್ಲೇ ಅರ್ಧ ಗಂಟೆಯಿಂದ ಬಾಕಿಯಾಗಿದ್ದ. ಈ ವೇಳೆ ಇದೇ ಮಾರ್ಗವಾಗಿ ಬರುತ್ತಿದ್ದ ಮಾಜಿ ಸಚಿವ ಯು.ಟಿ.ಖಾದರ್ ಅಂಬುಲೆನ್ಸ್ ನೋಡಿ ಕಾರ್ ನಿಲ್ಲಿಸಿ ವಿಚಾರಿಸಿದ್ದಾರೆ.

ಈ ವೇಳೆ ಕೋವಿಡ್-19 ರೋಗಿಯನ್ನು ಚಿಕಿತ್ಸೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದ ವಿಚಾರ ತಿಳಿದು, ಸ್ವತಃ ತಾವೇ ಮುಂದೆ ನಿಂತು ಸೋಂಕಿತನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಕೋವಿಡ್-19 ವಿಭಾಗಕ್ಕೆ ದಾಖಲು ಮಾಡಿದ್ದಾರೆ. ಖಾದರ್ ಅವರ ಉತ್ತಮ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *