ರಸ್ತೆ ಮಧ್ಯೆ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ

Public TV
1 Min Read

ಬೆಂಗಳೂರು: ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು ಇಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ಮದ್ಯ ಮಲಗಿ ಸರ್ಕಾರದ ವಿರುದ್ಧ ವಾಟಾಳ್ ಪ್ರತಿಭಟನೆ ನಡೆಸಿದರು. ಮಹಾಮಾರಿ ಕೊರೊನಾ ವೈರಸ್ ತಡೆಗೆ ಸರ್ಕಾರದ ವೈಫಲ್ಯ ಖಂಡಿಸಿ ವಾಟಾಳ್ ಈ ಪ್ರತಿಭಟನೆ ಮಾಡಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ಮದ್ಯ ಮಲಗಿ ಸರ್ಕಾರದ ವಿರುದ್ಧ ವಾಟಾಳ್ ಪ್ರತಿಭಟನೆ ನಡೆಸಿದರು. ಪ್ರತಿದಿನ ಸೂಕ್ತ ಚಿಕಿತ್ಸೆ ಸಿಗದೆ 100ಕ್ಕೂ ಅಧಿಕ ಮಂದಿ ರಾಜ್ಯದಲ್ಲಿ ಸಾವನ್ನಪ್ಪುತ್ತಿದ್ದಾರೆ. ಕೊರೊನಾ ಸೋಂಕು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲಾ. ಖಾಸಗಿ ಆಸ್ಪತ್ರೆಗಳು ಸರ್ಕಾರದ ಮಾತು ಕೇಳುತ್ತಿಲ್ಲಾ ಎಂದು ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *