ರಾಕೇಶ್ ಜೊತೆಗಿನ ಸ್ನೇಹ ಎಂದಿಗೂ ಮರೆಯಲು ಸಾಧ್ಯವಿಲ್ಲ: ಸುಧಾಕರ್

Public TV
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ದಿವಂಗತ ರಾಕೇಶ್ ನನ್ನು ಸಚಿವ ಸುಧಾಕರ್ ಇಂದು ನೆನಪು ಮಾಡಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಇಂದು ಮಾಜಿ ಮುಖ್ಯಮಂತ್ರಿ, ವಿಪಕ್ಷನಾಯಕ ಸಿದ್ದರಾಮಯ್ಯನವರ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯನವರು ನಮ್ಮನ್ನೆಲ್ಲ ಅಗಲಿ 4 ವರ್ಷಗಳೇ ಕಳೆದವು. ಅವರು ಇದ್ದಾಗ ಅವರ ಜೊತೆಗಿನ ಸ್ನೇಹ ಎಂದೂ ಮರೆಯಲು ಸಾಧ್ಯವಿಲ್ಲ. ಅವರಿಗೆ ನನ್ನ ಭಾವಪೂರ್ಣ ನಮನಗಳು ಎಂದು ಬರೆದುಕೊಂಡಿದ್ದಾರೆ.

ವಿದೇಶ ಪ್ರವಾಸದ ಸಂದರ್ಭದಲ್ಲಿ ರಾಕೇಶ್ ಅನಾರೋಗ್ಯಕ್ಕೆ ತುತ್ತಾಗಿದ್ದು. ಹೀಗಾಗಿ ಬೆಲ್ಜಿಯಂನ ಬ್ರಸೆಲ್ಸ್ ಯೂನಿವರ್ಸಿಟಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫಲಕಾರಿಯಾಗದೆ 2016ರ ಜುಲೈ ತಿಂಗಳಲ್ಲಿ ನಿಧನರಾಗಿದ್ದರು. ಈ ಹಿಂದೆ ಕಾಂಗ್ರೆಸ್ಸಿನಲ್ಲಿದ್ದಾಗ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಸುಧಾಕರ್ ಗುರುತಿಸಿಕೊಂಡಿದ್ದರು. ಹೀಗಾಗಿ ಸುಧಾಕರ್ ಹಾಗೂ ರಾಕೇಶ್ ಉತ್ತಮ ಸ್ನೇಹಿತರಾಗಿದ್ದರು. ಆದರೆ ಆಪರೇಷನ್ ಕಮಲದ ಸಂದರ್ಭದಲ್ಲಿ ಸುಧಾಕರ್ ಬಿಜೆಪಿ ಪಾಳಯಕ್ಕೆ ಸೇರಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *